About the Author

 ನಟನೆ, ನಾಟಕ ರಚನೆ, ನಿರ್ದೇಶನ, ಚಾರಣ, ಛಾಯಾಗ್ರಹಣ, ಬರವಣಿಗೆ, ಪಕ್ಷಿವೀಕ್ಷಣೆ, ಮರ-ಗಿಡಗಳ ಅಧ್ಯಯನ... ಹೀಗೆ ಅನೇಕ ಕ್ಷೇತ್ರಗಳನ್ನು ಹಚ್ಚಿಕೊಂಡವರು-ಅ ನಾ ರಾವ್ ಜಾದವ್. ಅನೇಕ ನಾಟಕಗಳಲ್ಲಿ ಹಾಗೂ ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಿರ್ದೆಶಿಸಿದ್ದಾರೆ.

ಕೆ ಪಿ ಪೂರ್ಣಚಂದ್ರ ತೇಜಸ್ವಿಯವರ ‘ಕಿರಗೂರಿನ ಗಯ್ಯಾಳಿಗಳು’ ಮತ್ತು ‘ಕರ್ವಾಲೊ’ ಕೃತಿಗಳನ್ನಾಧರಿಸಿ ನಾಟಕಗಳನ್ನು ರಚಿಸಿದ್ದಾರೆ. ‘ಬೆಕ್ಕಿಗೆ ಘಂಟೆ ಕಟ್ಟಿದವರು ಯಾರು?’ ಎಂಬ ಮಕ್ಕಳ ನಾಟಕವನ್ನೂ ರಚಿಸಿದ್ದಾರೆ. ‘ಹಿಮಗಿರಿಯ ಕಣಿವೆಗಳಲ್ಲಿ’ ಇವರ ಪ್ರಕಟಗೊಂಡಿರುವ ಚಾರಣ ಕಥನ ಕೃತಿ. ‘ಪ್ರಕೃತಿ-ಪರಂಪರೆ’ ಕುರಿತಾದ ಇವರ ಅಸಂಖ್ಯ ಚಿತ್ರ-ಲೇಖನಗಳು ನಾಡಿನ ಪ್ರಸಿದ್ಧ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ.

ಇವರ ಅನೇಕ ಹನಿಗವನಗಳೂ ಪ್ರಕಟಗೊಂಡಿವೆ. ಇವರ ಛಾಯಾಚಿತ್ರಗಳು ರಾಷ್ಟ್ರಮಟ್ಟದ ಪ್ರಶಸ್ತಿ - ಪುರಸ್ಕಾರಗಳನ್ನು ಪಡೆದಿವೆ. ನಮ್ಮ ಸುತ್ತಮುತ್ತಲಿನ ಮರ-ಗಿಡಗಳು ಮತ್ತು ಪಕ್ಷಿ ಸಮೂಹಗಳ ಮಾಹಿತಿಯನ್ನು ಸಹ ಒದಗಿಸಬಲ್ಲರು. ದೇಶದ ಉದ್ದಗಲಕ್ಕೂ ‘ಚಾರಣ’ವೆಂದು ಕಾಡು-ಮೇಡು ಅಲೆದಿದ್ದಾರೆ. ನಾಟಕ ಪ್ರದರ್ಶನಗಳನ್ನು ನೀಡುತ್ತಿರುವ, ಇವರ ‘ರಂಗ ವಿಸ್ಮಯ’ ತಂಡದ ಮೂಲಕ ಇದೀಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಲಿಸುವುದರೊಂದಿಗೆ ಅಭಿನಯದ ಪಾಠಗಳನ್ನೂ ಬೋಧಿಸುತ್ತಿದ್ದಾರೆ.

ಅ.ನಾ. ರಾವ್ ಜಾದವ್