About the Author

ಲೇಖಕ ನಟರಾಜ್, 1939 ನವೆಂಬರ್‌ 20 ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಹುಟ್ಟಿದರು. ತಂದೆ ಎ. ಎಸ್. ಭಟ್, ತಾಯಿ ಲಕ್ಷ್ಮಮ್ಮ. ಕಾಲೇಜು ದಿನಗಳಿಂದಲೂ ಸಾಹಿತ್ಯದ ಬಗ್ಗೆ ಒಲವಿದ್ದು, ನಿವೃತ್ತಿಯ ನಂತರ ಈಗ ಪೂರ್ಣ ಪ್ರಮಾಣದ ಬರಹಗಾರರು. ಸದಾ ಒಂದಿಲ್ಲೊಂದು ಕಡೆ ಪ್ರವಾಸ ಅಥವಾ ಬಿಡುವಿನ ವೇಳೆಯಲ್ಲಿ ಸಾಹಿತ್ಯ ರಚನೆಯಲ್ಲಿ ತೊಡಗುತ್ತಾರೆ. ಅವರ ಪ್ರವಾಸಾನುಭವದ ಲೇಖನಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ‘ಬಾತುಕೋಳಿ’ ಮತ್ತು ‘ಆತಂಕ’ ಎಂಬ ಎರಡು ಕಾದಂಬರಿಗಳು. ‘ಚಕ್ಕಂದ’ ಎಂಬ ಹನಿಗವನ ಸಂಕಲನ, ‘ರಸನಿಮಿಷ’ ಎಂಬ ಹಾಸ್ಯಕಥೆಗಳ ಸಂಗ್ರಹ. ‘ರಸ ವೈಚಾರಿಕತೆ’ ಎಂಬ ವೈಚಾರಿಕ ಸಾಹಿತ್ಯ ಕೃತಿಯನ್ನು ರಚಿಸಿದ್ದಾರೆ. ‘ದಿಲ್ಲಿ ದಂಗೆ ಮತ್ತು ಇತರೆ ಕಥೆಗಳು’ ಅವರ ಕಥಾ ಸಂಕಲನ. ಹೀಗೆ ಸಾಹಿತ್ಯ, ಪ್ರವಾಸ, ಸಂಶೋಧನೆಯಲ್ಲಿ ತೊಡಗಿಸಿ ಕೊಂಡಿದ್ದು 20 ಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ.

ಆಗುಂಬೆ ಎಸ್. ನಟರಾಜ್‌

(20 Nov 1939)