About the Author

1968 ಕೋಲಾರ ಜಿಲ್ಲೆಯ ಹೊಲ್ಲಂಬಳ್ಳಿಯಲ್ಲಿ ಜನಿಸಿದ ಅಮರೇಂದ್ರ ಹೊಲ್ಲಂಬಳ್ಳಿ, 1994ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸದ್ಯ ಬೆಂಗಳೂರಿನ ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮರುಮಾತು (ವಿಮರ್ಶಾ ಲೇಖನಗಳ ಸಂಕಲನ) ಸೇರಿದಂತೆ ಹಲವು ಕೃತಿಗಳನನ್ನು ಪ್ರಕಟಿಸಿದ್ದಾರೆ. ‘ಕಾಯ’ ಇವರ ಕಾದಂಬರಿ. 

ಅಮರೇಂದ್ರ ಹೊಲ್ಲಂಬಳ್ಳಿ