About the Author

ಸವದತ್ತಿ ತಾಲೂಕಿನ ಉಗರಗೋಳದ ಆನಂದ ಭೋವಿಯವರು ಸದ್ಯ ನರಗುಂದ ತಾಲೂಕಿನ ಅಕ್ಷರ ದಾಸೋಹ ಕಾರ್ಯಕ್ರಮದ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಪ್ಪತ್ತು ವರ್ಷಗಳಿಂದ ಶಿಕ್ಷಣ ಇಲಾಖೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಾಗಿ ಹಾಗೂ ಪ್ರೌಢಶಾಲಾ ಮುಖ್ಯಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದಾರೆ.

“ಮುತ್ತು ಕಟ್ಯಾಳ ನಮ್ಮವ್ವ”  2014ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪುರಸ್ಕೃತಗೊಂಡ ಕಥಾಸಂಕಲನ. ‘ಹಿಡಿ ಮಣ್ಣಿನ ಬೊಗಸೆ’ ಕಥಾಸಂಕಲನ, ‘ಸುಮ್ಮನಿರದ ಗಜಲ್’ ಕವನ ಸಂಕಲನ ಪ್ರಕಟಗೊಂಡಿವೆ. 2015ರಲ್ಲಿ ಬೇಂದ್ರೆ ಗ್ರಂಥ ಬಹುಮಾನ ದೊರಕಿದೆ. ಹಲವಾರು ಕತೆ ಕವನಗಳು ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದು ಹಲವು ಕತೆಗಳು ಬಹುಮಾನ ಪಡೆದಿವೆ. ಚಿಕ್ಕುಂಬಿ ಮಠದಿಂದ ಅಜಾತಶ್ರೀ ಪ್ರಶಸ್ತಿ ಸಮ್ಮಾನ. ಸವದತ್ತಿಯ ರಂಗ ಆರಾಧನಾ ತಂಡದಿಂದ ಇವರ ‘ಬಿಳುಪಿನ ಹೆಣ’    ‘ಕಲ್ಲೂರು ವಾಡೆದಾಗ’ ‘ಮಣ್ಣು’ ‘ಬಿರವ್ವನ ಬಾಳೆಹಣ್ಣು’ ಕತೆಗಳು ನಾಟಕಗಳಾಗಿ ಪ್ರದರ್ಶನಗೊಂಡಿವೆ.

ಆನಂದ ಭೋವಿ

BY THE AUTHOR