About the Author

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಸಮೀಪದ ತಾಕೊಡೆಯವರಾದ ಅನಿತಾ ಪೂಜಾರಿ ಅವರು ಸದ್ಯ ಮುಂಬೈಯಲ್ಲಿ ವಾಸಿಸುತ್ತಿದ್ದಾರೆ. ಕವಿ, ಕತೆಗಾರರಾಗಿರುವ ಅನಿತಾ ಅವರು ಅಂಕಣಕಾರರೂ ಆಗಿದ್ದಾರೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಪದವೀಧರರಾಗಿರುವ ಅವರು ಮುಂಬೈ ವಿ.ವಿ.ಯಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಾಯುತ್ತಾ ಕವಿತೆ, ಅಂತರಂಗದ ಮೃದಂಗ (ಕವನ ಸಂಕಲನ), ಮರಿಯಲದ ಮದಿಮಾಲ್‌ (ತುಳು ಕವನ ಸಂಕಲನ), ಸವ್ಯಸಾಚಿ ಸಾಹಿತಿ, ಮೋಹನ ತರಂಗ -ಇವರ ಕೃತಿಗಳು. ಸುಶೀಲ ಎಸ್. ಶೆಟ್ಟಿ ಸ್ಮಾರಕ ಕಾವ್ಯ ಪ್ರಶಸ್ತಿ, ಅಲ್ಲಮ ಸಾಹಿತ್ಯ ಪ್ರಶಸ್ತಿ, ಕವಿರತ್ನ ಪುರಸ್ಕಾರ, ಡಿ.ಗೋಪಾಲಕೃಷ್ಣ ಸ್ಮಾರಕ ಪ್ರಶಸ್ತಿ, ಡೊಂಬಿವಲಿ ತುಳುಕೂಟದ ತುಳುಸಿರಿ ಪ್ರಶಸ್ತಿ, ಕಾವ್ಯಸಿರಿ ಪ್ರಶಸ್ತಿ ಹೀಗೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. 

ಅನಿತಾ ಪಿ. ತಾಕೊಡೆ