About the Author

ಎ.ಎಸ್.ಎನ್ ಹೆಬ್ಬಾರ್ ಎಂದೇ ಪ್ರಸಿದ್ಧರಾಗಿರುವ ಐರೋಡಿ ಶಂಕರಣನಾರಾಯಣ ಹೆಬ್ಬಾರ್ ಅವರು ಮೂಲತಃ ಕುಂದಾಪುರದವರು. ವೃತ್ತಿಯಲ್ಲಿ ವಕೀಲರಾಗಿ, ಪ್ರವೃತ್ತಿಯಲ್ಲಿ ಸಾಹಿತಿಯಾಗಿ, ಪತ್ರಕರ್ತರಾಗಿಯೂ ಗುರುತಿಸಿಕೊಂಡಿರುವ ಹೆಬ್ಬಾರ್ ಅವರು ಹತ್ತಾರು ಸಂಘಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಹತ್ತಾರು ದೇಶ ಸುತ್ತಿದ ಅನುಭವ ಇರುವ ಹೆಬ್ಬಾರರರು 50 ವರ್ಷಗಳ ಪತ್ರಿಕಾ ವೃತ್ತಿಯ ಅನುಭವಗಳ ಜೊತೆಗೆ ಪ್ರವಾಸಕಥನಗಳನ್ನು ಬರೆದಿದ್ದಾರೆ. ಸಾಹಿತ್ಯ, ಪತ್ರಿಕಾಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಹತ್ವದ ಕಾರ್ಯನಿರ್ವಹಿಸಿರುವ ಹೆಬ್ಬಾರರಿಗೆ ಹಲವು ಗೌರವ ಪ್ರಶಸ್ತಿಗಳು ಲಭಿಸಿವೆ.

ಎ.ಎಸ್.ಎನ್. ಹೆಬ್ಬಾರ್ (ಐರೋಡಿ ಶಂಕರನಾರಾಯಣ ಹೆಬ್ಬಾರ್)