About the Author

ಅನುಷ್ ಎ ಶೆಟ್ಟಿ ಜನಿಸಿದ್ದು ಮಂಗಳೂರಿನಲ್ಲಿ. ವಿದ್ಯಾಭ್ಯಾಸ ಹುಣಸೂರು, ಮೈಸೂರಿನಲ್ಲಿ. ಮೈಸೂರು ವಿಶ್ವವಿದ್ಯಾನಿಲಯದಿಂದ ವಿದ್ಯುನ್ಮಾನ ಮಾಧ್ಯಮದಲ್ಲಿ ಎಂ.ಎಸ್ಸಿ ಪದವಿ ಪಡೆದಿರುವ ಇವರು ಕನ್ನಡಪ್ರಭ, ಸಾಧ್ವಿ ದಿನಪತ್ರಿಕೆಗಳಲ್ಲಿ, ಜೀ ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸಿದ್ದಾರೆ.

15 ವರ್ಷಗಳ ಕಾಲ ಮೃದಂಗ ವಾದನ ಕಲಿತ ಇವರು, ಅನೇಕ ಲಯವಾದ್ಯಗಳನ್ನು ನುಡಿಸಬಲ್ಲವರಾಗಿದ್ದು, ತಮ್ಮ ಗೆಳೆಯರೊಂದಿಗೆ ಕೂಡಿ ಆರಂಭಿಸಿರುವ ‘ನಾವು’ ಬ್ಯಾಂಡ್ ಮೂಲಕ ಸಂಗೀತದಲ್ಲಿ ಹೊಸ ಪ್ರಯೋಗಗಳನ್ನು ನಡೆಸುತ್ತಿದ್ದಾರೆ. ಕಳೆದ 8 ವರ್ಷಗಳಿಂದ ರಂಗ ಸಂಗೀತವನ್ನೂ ಮಾಡುತ್ತ ದೇಶಾದ್ಯಂತ ಓಡಾಡುತ್ತಿದ್ದಾರೆ. ಪ್ರಸ್ತುತ, ಗೆಳೆಯ ಶ್ರೀವತ್ಸ ಅವರೊಂದಿಗೆ ‘ಇವೆಂಟೊ’ ಎಂಬ ಇವೆಂಟ್ ಕಂಪೆನಿ ಮತ್ತು ಅನುಗ್ರಹ ಪ್ರಕಾಶನವನ್ನು ಮುನ್ನಡೆಸುತ್ತಿದ್ದಾರೆ. ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಬರಹಗಳಿಂದ ಪ್ರೇರಿತರಾಗಿ ಸಾಹಿತ್ಯ ಸೃಜಿಸುವೆಡೆಗೆ ಬಂದ ಅನುಷ್‍ರ ಈವರೆಗಿನ ಬರಹದ ಮೂಲವಸ್ತು ಪ್ರಕೃತಿಯೇ ಆಗಿದೆ. ಸಣ್ಣ ವಿಷಯಗಳಲ್ಲೂ ಕೌತುಕ ತೋರುತ್ತ, ಸದಾ ಊರಿಂದ ಊರಿಗೆ ಓಡಾಡುತ್ತ, ಹಾಡುತ್ತ, ಬರೆಯುತ್ತ ಇರುವ ಇವರು ಸದ್ಯ ಮೈಸೂರಿನಲ್ಲಿ ನೆಲೆಸಿದ್ದಾರೆ. ಇವರ ಎರಡನೇ ಕೃತಿಯಾಗಿದ್ದು, ‘ಆಹುತಿ’, ‘ಕಳ್ಬೆಟ್ಟದ ದರೋಡೆಕೋರರು’, ‘ಜೋಡ್ಪಾಲ’ ಮತ್ತು ‘ನೀನು ನಿನ್ನೊಳಗೆ ಖೈದಿ’ ಇವರ ಪ್ರಕಟಿತ  ಕಾದಂಬರಿಗಳು.

‌ಅನುಷ್ ಎ. ಶೆಟ್ಟಿ