About the Author

ಲೇಖಕ ಅಶ್ವತ್ಥನಾರಾಯಣ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ. ಎ, ಎಂ.ಫಿಲ್ ಮತ್ತು ಪಿ.ಎಚ್.ಡಿ ಪದವೀಧರರು. ಬೆಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ  ನಿವೃತ್ತರಾದರು.  2013-14 ರಲ್ಲಿ 7ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕ ರಚನಾ ಸಮಿತಿಯ ಅಧ್ಯಕ್ಷರಾಗಿ,  2016ರಲ್ಲಿ 8,9, 10ಣೆ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ಪರಿಷ್ಕರಣಾ ಸಮಿತಿಯ ಸದಸ್ಯರಾಗಿದ್ದರು. ವಸಾಹತುಶಾಹಿ ಕಾಲಘಟ್ಟದ ಚರಿತ್ರೆ ಅಧ್ಯಯನ ಇವರ ವಿಶೇಷ ಆಸಕ್ತಿಯ ಕ್ಷೇತ್ರವಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಅನೇಕ ಗೋಷ್ಠಿಯಲ್ಲಿ ತಮ್ಮ ವಿದ್ವತ್ಪೂರ್ಣ ಪ್ರಬಂಧಗಳನ್ನು ಮಂಡಿಸಿರುತ್ತಾರೆ.

ಕೃತಿಗಳು: ‘ಕರ್ನಾಟಕದಲ್ಲಿ ಸ್ವಾತಂತ್ಯ್ರ ಹೋರಾಟ’ ಒಂದು ಅವಲೋಕನ

ಅಶ್ವತ್ಥನಾರಾಯಣ