About the Author

ಬಿ. ಮಂಜುನಾಥ ಕಾಮತ್, ಹಾಲಾಡಿ ಅವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾಲಾಡಿಯವರು. ಹಾಲಾಡಿ, ಶಂಕರನಾರಾಯಣದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಪಡೆದರು. ನಂತರ ಕುಂದಾಪುರದ ಭಂಡಾರ್ಕಾರ್ಸ್‌ ಕಾಲೇಜಿನಲ್ಲಿ ಬಿ.ಎಸ್ಸಿ ಪೂರ್ಣಗೊಳಿಸಿದ್ದಾರೆ. ಸಿಂಡಿಕೇಟ್‌ ಬ್ಯಾಂಕಿನ ಮಥುರಾ, ನವದೆಹಲಿ, ಮಂಗಳೂರು, ಬೆಳಗಾವಿ, ಶಂಕರನಾರಾಯಣ ಶಾಖೆ-ಕಚೇರಿಗಳಲ್ಲಿ ಮೂವತ್ತಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಹಾಲಾಡಿಯ ಬೆಳಾರಮಕ್ಕಿಯಲ್ಲಿ ನೆಲೆಸಿದ್ದಾರೆ. ಯಕ್ಷಗಾನ, ನಾಟಕ, ಸಾಹಿತ್ಯದಲ್ಲಿ ಬಾಲ್ಯದಿಂದಲೇ ಆಸಕ್ತಿ ಹೊಂದಿರುವ ಅವರು ಕನ್ನಡ ನಾಡಿನ ಬಹುತೇಕ ಪತ್ರಿಕೆಗಳಲ್ಲಿ ಐವತ್ತು ವರ್ಷಗಳಿಂದ ಕಥೆ, ಕವನ, ಲೇಖನಗಳು ಪ್ರಕಟಿಸಿದ್ದಾರೆ.

ಕೃತಿಗಳು: 'ಮತ್ತೊಂದು ದಿನ ಮತ್ತು ಇತರ ಕಥೆಗಳು', 'ಕಣ್ಣೆರೆದ ಕನಸು', ‘ಅನಾಥ ಪ್ರೀತಿಯ ಅನುಬಂಧ’

ಬಿ. ಮಂಜುನಾಥ ಕಾಮತ್ ಹಾಲಾಡಿ