About the Author

ಲೇಖಕ ಬಿ.ಎನ್. ಮಲ್ಲೇಶ್ ಅವರು ಮೂಲತಃ ತುಮಕೂರು ಜಿಲ್ಲೆಯ ಬಡಗರಹಳ್ಳಿ ಗ್ರಾಮದವರು. ಆದರೆ, ದಾವಣಗೆರೆಯಲ್ಲಿ ವಾಸ. ವೃತ್ತಿಯಿಂದ ಪತ್ರಕರ್ತರು. ಎಂ.ಎ. ಎಲ್.ಎಲ್.ಬಿ ಪದವೀಧರರು. ದಾವಣಗೆರೆ ನಗರವಾಣಿ ದಿನಪತ್ರಿಕೆಯ ಸಹ ಸಂಪಾದಕರು. ಉದಯ ಟಿವಿಯ ಜಿಲ್ಲಾ (1998-2018) ವರದಿಗಾರರು. ದಾವಣಗೆರೆ ವಿಶ್ವವಿದ್ಯಾಲಯದ ಅಕಾಡೆಮಿ ಕೌನ್ಸಿಲ್ ಸದಸ್ಯರು. 

ಕೃತಿಗಳು: ಬ್ರೇಕಿಂಗ್ ನ್ಯೂಸ್  (ವಿಡಂಬನೆ) ಮತ್ತು ತೆಪರೇಸಿ ರಿಟರ್ನ್ಸ್ (ವಿಡಂಬನಾತ್ಮಕ ಬರಹಗಳು)  ಬೇರು ಒಣಗಿದೆ ಪ್ರೀತಿ ಮತ್ತು ಟ್ರ್ಯಾಕುಗಳ ಮೇಲೆ ಹುಣ್ಣಿಮೆ ( ಕವನ ಸಂಕಲನಗಳು )

ಪ್ರಶಸ್ತಿ-ಗೌರವಗಳು: ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಗುಲಬರ್ಗಾದ ಅಮ್ಮ ಪ್ರಶಸ್ತಿ, ದಾವಣಗೆರೆಯಲ್ಲಿ ಮಹಾಲಿಂಗರಂಗ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. 

 

ಬಿ.ಎನ್. ಮಲ್ಲೇಶ್