About the Author

ಲೇಖಕ ಡಾ. ಪ್ರಭಾಕರ ಶಿಶಿಲ ಅವರು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನೆಹರೂ ಮೆಮೋರಿಯಲ್‌ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ಸಾಹಿತ್ಯದತ್ತ ಹೆಚ್ಚಿನ ಆಸಕ್ತಿ ಹೊಂದಿರುವ ಅವರು ಹಲವು ಕೃತಿಗಳನ್ನು ರಚಿಸಿದ್ದಾರೆ. ಜೊತೆಗೆ ಅರ್ಥಶಾಸ್ತ್ರದ ಪಠ್ಯಪುಸ್ತಕಗಳನ್ನು ರಚಿಸಿದ್ದಾರೆ.
ಕೃತಿಗಳು:  ಮತ್ಸ್ಯಗಂಧಿ, ಗಗ್ಗರ, ಬಾರಣೆ, ಗುಜರಿ ಅದ್ದಿಲಿಚ್ಚನ ಜಿಹಾದಿಯ, ಕೊಡಗಿನ ಐತಿಹ್ಯ ಕಥೆಗಳು, ಬೆಟ್ಟದಾ ಮೇಲೊಂದು, ಕಪಿಲಳ್ಳಿಯ ಕತೆಗಳು, ಜಲಲ ಜಲಧಾರೆ, ದೊಡ್ಡ ವೀರ ರಾಜೇಂದ್ರ, ಕೊಡಗಿನ ಕತೆಗಳು. 
ಶಿಶಿಲರನ್ನೇ ಕುರಿತು ಅನೇಕ ಗ್ರಂಥಗಳು ಪ್ರಕಟವಾಗಿವೆ . ಸುವರ್ಣ ಅಭಿನಂದನಾ ಸ್ಮರಣಿಕೆ, ಸಾಹಿತ್ಯ ಶಿಶಿಲ: ಶಿಶಿಲರ ಸಮಗ್ರ ಸಾಹಿತ್ಯ ವಿಮರ್ಶೆ, ಶಿಶಿಲರ ಜೀವನ ಮತ್ತು ಸಾಧನೆಗಳು, ಪ್ರಭಾಕರ ಶಿಶಿಲರ ಸಾಹಿತ್ಯ ಕುರಿತು ಡಾ. ಮೋಹನ ಕುಮಾರ ಅವರು ಪಿಹೆಚ್.ಡಿ. ಮಹಾ ಪ್ರಬಂಧ ಬರೆದಿದ್ದಾರೆ. 
ಪ್ರಶಸ್ತಿಗಳು :  ಗೊರೂರು ಪ್ರಶಸ್ತಿ, ಶಿವಮೊಗ್ಗ ಕರ್ನಾಟಕ ಸಂಘದಿಂದ ಕುವೆಂಪು ಕಾದಂಬರಿ ಪುರಸ್ಕಾರ, ಪುಟ್ಟರಾಜ ಗವಾಯಿ ಕಾದಂಬರಿ ಪ್ರಶಸ್ತಿ, ದಾವಣಗೆರೆಯ ಪಂಪ ಪ್ರತಿಷ್ಠಾನದ ಸಾಹಿತ್ಯಶ್ರೀ ಪ್ರಶಸ್ತಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಲಭಿಸಿವೆ.

 

ಬಿ. ಪ್ರಭಾಕರ ಶಿಶಿಲ

(21 Dec 1953)

Awards