About the Author

ಕವಿ, ಕತೆಗಾರ, ವಿಮರ್ಶಕ ಹಾಗೂ ಚಲನಚಿತ್ರಕಾರ ಬಿ.ಆರ್‌. ಲಕ್ಷ್ಮಣರಾವ್‌ ಅವರು 1946 ಸೆಪ್ಟೆಂಬರ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಗಟ್ಟ ತಾಲ್ಲೂಕಿನ ಚೀಮಂಗಲದಲ್ಲಿ ಜನಿಸಿದರು. ತಂದೆ ರಾಜಾರಾವ್. ತಾಯಿ ವೆಂಕಟಲಕ್ಷ್ಮಮ್ಮ. ಚಿಂತಾಮಣಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು. ಚಿಂತಾಮಣಿಯ ಪ್ರೌಢಶಾಲೆ ಉಪಾಧ್ಯಾಯರಾಗಿ ವೃತ್ತಿ ಆರಂಭಿಸಿದ ಇವರು ವಿನಾಯಕ ಟುಟೋರಿಯಲ್ಸ್‌ನ ಪ್ರಿನ್ಸಿಪಾಲರಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಸಂಪೂರ್ಣವಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. 

ಇವರು ಬರೆದ ಪ್ರಮುಖ ಕೃತಿಗಳೆಂದರೆ ಲಿಲ್ಲಿ ಪುಟ್ಟಿಯ ಹಂಬಲ, ಶಾಂಗ್ರಿ-ಲಾ, ಅಪರಾಧಂಗಳ ಮನ್ನಿಸೊ, ಗೋಪಿ ಮತ್ತು ಗಾಂಡಲೀನ, ಟುವಿಟಾರ, ಎಡೆ ಮತ್ತು ಇವಳು ನದಿಯಲ್ಲ(ಕವನ ಸಂಕಲನಗಳು), ಕ್ಯಾಮರಾ ಕಣ್ಣು (ಸಮಗ್ರ ಕಾವ್ಯ), ಗೆಸ್ಟರ್‌ ಕಥಾ ಸಂಕಲನ, ಮುಂತಾದವು. 

ಲಕ್ಷ್ಮಣ್‌ರಾವ್‌ ಅವರ  'ಲಿಲ್ಲಿ ಪುಟ್ಟಿಯ ಹಂಬಲ' ಕವನ ಸಂಗ್ರಹಕ್ಕೆ 1981ರ ಸಾಹಿತ್ಯ ಅಕಾಡೆಮಿ ಬಹುಮಾನ ಲಭಿಸಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಇವರು ನೀಡಿದ ಕೊಡುಗೆಗೆ ಗೊರೂರು ಸಾಹಿತ್ಯ ಪ್ರಶಸ್ತಿ, ಚುಟುಕು ರತ್ನ ಪ್ರಶಸ್ತಿ, ವಿಶ್ವೇಶ್ವರಯ್ಯ ಸಾಹಿತ್ಯ ಪ್ರಶಸ್ತಿ, ಡಾ.ಪು.ತಿ.ನ. ಕಾವ್ಯ ಪುರಸ್ಕಾರ, ಆರ್ಯಭಟ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕೋಲಾರ ಜಿಲ್ಲೆ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಬಿ.ಆರ್. ಲಕ್ಷ್ಮಣರಾವ್

(09 Sep 1946)

BY THE AUTHOR