About the Author

ಸಾಹಿತ್ಯ, ನಾಟಕ ರಂಗಭೂಮಿ ಕ್ಷೇತ್ರಗಳಲ್ಲಿ ತಮ್ಮನ್ನು ಸಕ್ರಿಯರನ್ನಾಗಿ ತೊಡಗಿಸಿಕೊಂಡವರು ಬಿ. ಸಿದ್ಧಲಿಂಗಯ್ಯ ಕಂಬಾಳು. ನಿಸರ್ಗಪ್ರಿಯ ಎಂಬ ನಾಮಾಂಕಿತದಿಂದ ಬಹು ಜನಪ್ರಿಯತೆ ಗಳಿಸಿದ್ದ ಇವರು ಬೆಂಗಳೂರು ಗ್ರಾಮಾಂತರದ ಕಂಬಾಳು ಗ್ರಾಮದಲ್ಲಿ ಜನಿಸಿದರು. ಬಾಲ್ಯದಿಂದಲೂ ನಟನೆಯಲ್ಲಿ ಆಸಕ್ತಿ. ನಂತರ ಕೆಲ ವರ್ಷ ಗುಜ ಕಂಪನಿಯಲ್ಲಿ ಅಭಿನಯಿಸಿದರು. ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ನಾಟಕ ರಚನೆ ಪ್ರಾರಂಭಿಸಿದರು. ಕಾದಂಬರಿ, ಮಹಾಕಾವ್ಯ, ಜನಪದ ಗ್ರಂಥ ಸಂಪಾದನೆ, ಸಂಶೋಧನೆ(ಇತಿಹಾಸ) ಮುಂತಾದ ಪ್ರಕಾರಗಳಲ್ಲಿ ರಚನೆ ಮಾಡಿದ್ದಾರೆ.

ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾಗಿ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೆಶಕರಾಗಿ, ನಾಟಕ ಅಕಾಡೆಮಿಯ ರಿಜಿಸ್ಟಾರ್ ಮುಂತಾಗಿ ಗೌರವ ಹುದ್ದೆಗಳನ್ನು ಅಲಂಕರಿಸಿ ಕಾರ್ಯ ನಿರ್ವಹಣೆ. ಬೆನಕನಕೆರೆ, ಸ್ವರ್ಗಸ್ಥ ('ಸ್ವರ್ಗಸ್ಥ' ಕೃತಿಗೆ ರಾಜ್ಯ ಸಾಹಿತಿ ಅಕಾಡೆಮಿಯ ಬಹುಮಾನ ಲಭಿಸಿದೆ), ವ್ಯವಸ್ಥೆ, ಯಶೋಧರ, ತಿರುಕರಾಜ, ರುರ್ದ ಚೋರಪುರಾಣ (ಪ್ರಹಸನ ಕರ್ನಾಟಕ ನಾಟಕ ಅಕಾಡೆಮಿ ಏರ್ಪಡಿಸಿದ್ದ ನಾಟಕ ರಚನಾ ಸ್ಪರ್ಧೆ ಬಹುಮಾನ)  ಮುಂತಾದ ಕೃತಿಗಳನ್ನು ರಚಿಸಿರುವ ಇವರಿಗೆ ಕಂಬಾಳರು ಕರ್ನಾಟಕ ಸಾಹಿತ್ಯ ಅಕಾಡೆಮಿ, ಜಾನಪದ ಅಕಾಡೆಮಿ, ನಾಟಕ ಅಕಾಡೆಮಿಗಳಿಂದ ಪುರಸ್ಕೃತರಾಗಿದ್ದಾರೆ.

ತೊಂಭತ್ತರ ದಶಕದಲ್ಲಿ (1990) ಬೆಂಗಳೂರು ದೂರದರ್ಶನದಿಂದ ಪ್ರತಿ ಶನಿವಾರ ಪ್ರಸಾರವಾಗುತ್ತಿದ್ದ 'ಸಿರಿಗಂಧ' ಜಾನಪದ ಚಿತ್ರಮಾಲಿಕೆಗೆ ಸಂಶೋಧನಾ ಸಾಹಿತ್ಯ ಹಾಗೂ ನಿರೂಪಣಾ ಸಾಹಿತ್ಯ ರಚಿಸಿದ್ದ ಇವರು ಕನ್ನಡ ಚಿತ್ರ ನಿರ್ದೇಶಕರ ಒತ್ತಾಸೆಯ ಮೇರೆಗೆ, 'ಅಲ್ಲಮ', 'ರಾಮಾ ರಾಮಾ ರೇ' ಚಲನಚಿತ್ರಗಳಿಗೆ ಸಂಭಾಷಣೆ ಬರೆದಿದ್ದಾರೆ. ರಾಮಾ ರಾಮಾ ರೇ... ಚಿತ್ರಕ್ಕಾಗಿ 'ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ ಸಂದಿದ್ದು ಇವರ ನವಿರು ಸಾಹಿತ್ಯಕ ಘಮಲಿಗೆ ಸಾಕ್ಷಿಯಾಗಿದೆ. 

ಬಿ. ಸಿದ್ಧಗಂಗಯ್ಯ ಕಂಬಾಳು (ನಿಸರ್ಗಪ್ರಿಯ)

(10 May 1945)