About the Author

ಲೇಖಕ ಬಾಲಕೃಷ್ಣ ಬಿ.ಎಂ. ಹೊಸಂಗಡಿ ಅವರು ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಡಾ. ರಾಧಾಕೃಷ್ಣ ಎನ್. ಬೆಳ್ಳರೂರು ಅವರ ಮಾರ್ಗದರ್ಶನದಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯಕ್ಕೆ ‘ದ್ರಾವಿಡ ನವ್ಯ ಕಾವ್ಯ’ ಎಂಬ ಮಹಾ ಪ್ರಬಂಧ ಸಲ್ಲಿಸಿ ಪಿಎಚ್.ಡಿ ಪದವಿ ಪಡೆದಿದ್ದಾರೆ. ಹೊಸಂಗಡಿ ಅವರು ದ್ರಾವಿಡ ನವ್ಯ ಕಾವ್ಯ ಸಂಶೋಧನೆಯ ಸಂದರ್ಭದಲ್ಲೇ ಲಂಡನ್ ವಿಶ್ವವಿದ್ಯಾನಿಲಯದ ಟಿ.ಎಸ್. ಎಲಿಯಟ್ ಇಂಟರ್ ನ್ಯಾಷನಲ್ ಸಮ್ಮರ್ ಸ್ಕೂಲ್ 2013ರ ಬರ್ಸರಿ ಅವಾರ್ಡ್ ಗೂ ಪಾತ್ರರಾಗಿದ್ದಾರೆ. ಇವರ ಸಂಶೋಧನ ಲೇಖನಗಳು ದೇಶ-ವಿದೇಶಗಳ ವಿವಿಧ ಅಂತರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಮಂಡನೆಯಾಗಿದ್ದು, ಪ್ರತಿಷ್ಠಿತ ಸಂಶೋಧನ ನಿಯತಕಾಲಿಕೆಗಳಲ್ಲೂ ಪ್ರಕಟವಾಗಿವೆ.

ಬಾಲಕೃಷ್ಣ ಬಿ.ಎಂ. ಹೊಸಂಗಡಿ