About the Author

ಡಾ. ಬಸವರಾಜ ಎಸ್. ಕಲೆಗಾರ ಮೂಲತಃ ಯಾದಗಿರಿ ಜಿಲ್ಲೆಯವರು. ಕವಿ, ಲೇಖಕ, ಚಿತ್ರಕಲಾವಿದರು. ಎಂ.ವಿ.ಎ, ಎಂ.ಫಿಲ್, ಪಿಹೆಚ್.ಡಿ ಪದವೀಧರರು. ಹಂಪಿ ಕನ್ನಡ ವಿವಿಯಲ್ಲಿ ದೂರ ಶಿಕ್ಷಣ ನಿರ್ದೇಶನಾಯ ಮೂಲಕ ಪತ್ರಿಕೋದ್ಯಮ ಡಿಪ್ಲೋಮಾ ಪೂರ್ಣಗೊಳಿಸಿದ್ದಾರೆ. ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ 2015-16ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಸಂಶೋಧನೆ ಕೈಗೊಂಡಿದ್ದು, ಸಂಶೋಧನಾ ಅಧ್ಯಯನ ವಿಷಯ ‘ಸಗರನಾಡಿನ ಜನಪದ ಶಿಲ್ಪಿಗಳ ಕಲೆ ಮತ್ತು ಬದುಕು: ಒಂದು ಅಧ್ಯಯನ’ ಪ್ರಬಂಧ ಸಲ್ಲಿಸಿದ್ದಾರೆ. ಪ್ರಕಟಿತ ಕೃತಿಗಳು- ನೀ ಮರೆಯಾದ ಕ್ಷಣಗಳು, ಬೆಳಕು, ಸಂಗಣ್ಣ ಎಂ. ದೋರನಹಳ್ಳಿ ಕಲೆ ಮತ್ತು ಬದುಕು(ಸಂಶೋಧನೆ), ಕಲಾನ್ವೇಷಣೆ, ಚಿತ್ರಶಿಲೆಯಲ್ಲಿ ಬುದ್ಧ, ಗಡಿನಾಡ ಚಿತ್ರಶಾಲೆ, ದೃಶ್ಯ ಸಂವೇದನೆ, ರೇಖಾನಮನ, ಸುಡುವ ನೆಲದ ದೃಶ್ಯಕಾವ್ಯ, ಯಾದಗಿರಿ ಜಿಲ್ಲೆಯ ಚಿತ್ರಕಲೆ. ನೀ ಮರೆಯಾದ ಕ್ಷಣಗಳು ಪುಸ್ತಕಕ್ಕೆ ಪುಸ್ತಕ ಪ್ರಶಸ್ತಿ, ಬೆಳಕು ಕೃತಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಬಸವಜ್ಯೋತಿ ರಾಜ್ಯ ಪ್ರಶಸ್ತಿ, ಸಾಧನಾ ಶ್ರೀ ಪ್ರಶಸ್ತಿ, ಕನ್ನಡ ಸೇವಾ ರತ್ನ ಪ್ರಶಸ್ತಿ, ಯಾದಗಿರಿ ಜಿಲ್ಲಾಡಳಿತದಿಂದ ಗೌರವ ಸನ್ಮಾನ ಸೇರಿದಂತೆ ಹಲವು ಪ್ರಶಸ್ತಿ ಗೌರವಗಳು ಸಂದಿವೆ.

ಬಸವರಾಜ ಎಸ್. ಕಲೆಗಾರ

(06 Jul 1984)