About the Author

ಬಸಯ್ಯಸ್ವಾಮಿ ಕಮಲದಿನ್ನಿ ಅವರು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಆಮದಿಹಾಳ ಗ್ರಾಮದವರು. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಎಂ.ಎ ಕನ್ನಡ ಪದವಿ ಪಡೆದಿದ್ದಾರೆ. ಅದೇ ವಿಶ್ವವಿದ್ಯಾಲಯದಲ್ಲೇ ‘ಕನ್ನಡ ಕಾದಂಬರಿಗಳಲ್ಲಿ ವಲಸೆ ಪ್ರಜ್ಞೆ’ ಎಂಬ ಮಹಾಪ್ರಬಂಧ ರಚಿಸಿ ಪಿಎಚ್.ಡಿ ಪದವಿ ಪಡೆದಿದ್ದಾರೆ. ಇವರ ಕವಿತೆಗಳು ಕ್ರೈಸ್ಟ್ ಯ್ಯೂನಿವರ್ಸಿಟಿ, ಬೇಂದ್ರೆ ಅಂತರ ಕಾಲೇಜು ಸ್ಪರ್ದೆ ಒಳಗೊಂಡು ವಿವಿಧೆಡೆ ಪ್ರಶಸ್ತಿ ಗೌರವ ಪಡೆದಿವೆ. ಹೊಸತಲೆಮಾರಿನ ಕವಿಯಾಗಿರುವ ಬಸಯ್ಯ ಸ್ವಾಮಿ ಕಮಲದಿನ್ನಿಯವರು ‘ಅವಳೆದೆಯ ಡೈರಿಯೊಳಗೆ’ ಎಂಬ ಕವನ ಸಂಕಲನವನ್ನು ಪ್ರಕಟಿಸಿದ್ದಾರೆ.   

ಬಸಯ್ಯ ಸ್ವಾಮಿ ಕಮಲದಿನ್ನಿ

(01 Jun 1989)

BY THE AUTHOR