About the Author

ಭುವನಾ ಹಿರೇಮಠ ಅವರ ಪೂರ್ಣ ಹೆಸರು ಭುವನೇಶ್ವರಿ ರಾಚಯ್ಯ ಹಿರೇಮಠ. ಹುಟ್ಟೂರು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸೋಮನಟ್ಟಿ ಎಂಬ ಪುಟ್ಟ ಹಳ್ಳಿ. ತಂದೆ- ರಾಚಯ್ಯ (ಪ್ರವಚನಕಾರರು), ತಾಯಿ - ಶಿವಗಂಗಾ. ಸದ್ಯ ಬೆಳಗಾವಿ ಜಿಲ್ಲೆಯ ಹಿರೇನಂದಿಹಳ್ಳಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಓದು, ಬರವಣಿಗೆಯ ಹವ್ಯಾಸವಿರುವ ಭುವನಾ ಹಿರೇಮಠರ ಮೊದಲ ಕವನ ಸಂಕಲನ ಟ್ರಯಲ್ ರೂಮಿನ ಅಪ್ಸರೆಯರು ಕೃತಿ ಪ್ರಕಟಣೆಗೊಂಡಿದೆ. 2020ರಲ್ಲಿ  ಅವರ 'ಹಸಿರು ಪೈಠಣ ಸೀರಿ' ಕಥೆಗೆ ವಿಜಯ ಕರ್ನಾಟಕ ಯುಗಾದಿ ಕತಾಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ದೊರೆತಿದೆ. 

ಭುವನಾ ಹಿರೇಮಠ

(03 Nov 1984)