About the Author

ಸಿ.ಬಿ.ಶೈಲಾ ಜಯಕುಮಾರ್ ಅವರು ಮೂಲತಃ ಚಿತ್ರದುರ್ಗದವರು. MA (English) M Ed , Diploma in Journalism ನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸಿದ ಅವರು ಜೂನ್‌ 2020 ರಲ್ಲಿ ನಿವೃತ್ತಿ ಹೊಂದಿದರು. ಚಿತ್ರದುರ್ಗದ ಲೇಖಕಿಯರ ಕಥಾಸಂಕಲನದ 'ಮೊದಲ ಹೆಜ್ಜೆ' ಕೃತಿಯ ಸಂಪಾದಕಿ ಆಗಿ ಕಾರ್ಯನಿರ್ವಹಿಸಿದ್ದಾರೆ.

ಕೃತಿಗಳು : ನುಡಿಗನ್ನಡಿ (ಆಕಾಶವಾಣಿಯ ನಲ್ನುಡಿಗಳ ಸಂಕಲನ), ಅಹಲ್ಯಾಂತರಂಗ, ಏಕಸೂತ್ರದಲ್ಲಿ ಅನೇಕ (ವೈಚಾರಿಕ ಲೇಖನಗಳ ಸಂಕಲನ) , ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರ ಬಗ್ಗೆ ರಸಪ್ರಶ್ನೆಗಳು, ಉತ್ತರೆಯ ಸ್ವಗತ, ಇವರು ಚಿರಂಜೀವಿಗಳು.(ಪುರಾಣಗಳ ಚಿರಾಯುಗಳ ಬಗ್ಗೆ), ಅಂತಃಕರಣದ ರಾಯಭಾರಿಗಳು, ಅಶ್ವತ್ಥಾಮೋ ಹತಃ (ಕಥಾ ಸಂಕಲನ), ಸಭಾ ಮರ್ಯಾದೆ ಮತ್ತು ಇತರೆ ಪ್ರಬಂಧಗಳು, ಪುರಾಣ ಪ್ರಮಾಣಗಳು.

ಸಿ.ಬಿ.ಶೈಲಾ ಜಯಕುಮಾರ್