About the Author

ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಬೆಳವಂಗಲ ಗ್ರಾಮದವರು. ಬಿ.ಎ(ಆನರ್ಸ್) ಹಾಗೂ ಎಲ್.ಎಲ್.ಬಿ. ಪದವೀಧರರು. ಬೆಂಗಳೂರಿನ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಸಹ-ಪ್ರಾಧ್ಯಾಪಕರಾಗಿದ್ದೂ, ಪ್ರಸಿದ್ಧ ವಕೀಲರು. ಹಲವಾರು ಕಾನೂನು ಕಾಲೇಜುಗಳಲ್ಲಿ ಗೌರವ ಉಪನ್ಯಾಸಕರಾಗಿದ್ದರು. ರೈತಪರ ಮತ್ತು ಕನ್ನಡಪರ ಹೋರಾಟಗಾರರ ವಿರುದ್ಧ ಹಾಕಿದ ಪ್ರಕರಣಗಳಲ್ಲಿ ಅವರ ಪರ ವಕಾಲತ್ತು ವಹಿಸಿದ್ದರು. ಕೋರ್ಟಿನಲ್ಲಿ ಕನ್ನಡದಲ್ಲೇ ವಾದ ಮಂಡಿಸುವ ಕೌಶಲ್ಯವುಳ್ಳವರು.  

ಕೃತಿಗಳು: ವಕೀಲರೊಬ್ಬರ ವಗೈರೆಗಳು

ಪ್ರಶಸ್ತಿ-ಪುರಸ್ಕಾರಗಳು: ವಕೀಲರೊಬ್ಬರ ವಗೈರೆಗಳು ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ ಹಾಗೂ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಸಿ.ಎಚ್. ಹನುಮಂತರಾಯ