About the Author

ಯುವ ಸಾಹಿತಿ ಸಿ.ಎಸ್. ಆನಂದ: ಮೂಲತಃ ಕಲಬುರಗಿಯವರು. ವೃತ್ತಿಯಿಂದ ಇಂಗ್ಲಿಷ್ ಉಪನ್ಯಾಸಕರು. ಇವರ ಕಥೆ, ಕವನ, ಪ್ರಬಂಧ, ವಿಮರ್ಶಾತ್ಮಕ ಲೇಖನಗಳು ನಾಡಿನ ಹಲವಾರು ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ವಾಸ್ತವದ ಮತ್ತು ಸಂಕೇತವಾದದ ಪದರುಗಳ ಪರಿಮಿತಿಯನ್ನು ತಮ್ಮ ಕಥೆ-ಕಾವ್ಯದಲ್ಲಿ ಬಹಳ ಸುಲಭವಾಗಿ ಮೀರಲೆತ್ನಿಸುತ್ತ ಮುನ್ನಡೆಸಿದ್ದಾರೆ. ಕಲಬುರಗಿ ಆಕಾಶವಾಣಿ ಕೇಂದ್ರದಿಂದ ಸುಮಾರು ಮೂವತ್ತೂ ಹೆಚ್ಚು ಭಾಷಣಗಳು, ಕಲಬುರಗಿ ದೂರದರ್ಶನ ಕೇಂದ್ರ ಮತ್ತು ಬೆಂಗಳೂರು ದೂರದರ್ಶನ ಚಂದನ ವಾಹಿನಿಯಲ್ಲಿ ಇವರ ಸಂದರ್ಶನಗಳು ಪ್ರಸಾರಗೊಂಡಿವೆ.

ಕೃತಿಗಳು:  ಹಡೆದವ್ವ, ಜೀವನದಿ ( ಕಥಾಸಂಕಲನಗಳು), ಒಡಲಹಾಡು, ಮಧುರ ಹನಿಗಳು (ಕವನ ಸಂಕಲನಗಳು) ತಲ್ಲಣಿಸದಿರು ಮನವೆ (ವಚನಗಳ ಸಂಕಲನ), ಬಸವನಾಡಿನ ಬೆಳಕು (ಜಾನಪದ ತ್ರಿಪದಿಗಳ ಸಂಕಲನ), ಸಂಪ್ರೀತಿ (ಮುಕ್ತಕಗಳ ಸಂಕಲನ), ಸಂಗಡ (ವಿಮರ್ಶಾ ಲೇಖನಗಳ ಸಂಕಲನ), ಸಹ ಲೇಖಕರೊಂದಿಗೆ ಇಂಗ್ಲಿಷ್ ಕೃತಿಗಳು : ಫೆಸಿಲಿಟೇಟಿಂಗ್  ಲರ್ನಿಂಗ್  ಇನ್ ಇಂಗ್ಲಿಷ್, ಕಮ್ಯುನಿಕೇಶನ್ ಸ್ಕಿಲ್ಸ್ ಇನ್ ಇಂಗ್ಲಿಷ್, ಈಜಿ ಟು ಗೆಟ್ ಮೋರ್‍  ಮಾರ್ಕ್ಸ್ 

ಪ್ರಶಸ್ತಿ-ಪುರಸ್ಕಾರಗಳು: ಅಖಿಲ ಭಾರತ ದಲಿತ ಸಾಹಿತ್ಯ ಪರಿಷತ್ತು,ಗದಗ ರಾಜ್ಯಮಟ್ಟದ ಪುಸ್ತಕ ಬಹುಮಾನ ಮತ್ತು ಪ್ರಶಸ್ತಿ, ಗುಲಬರ್ಗಾ ವಿಶ್ವವಿದ್ಯಾಲಯ ಪ್ರಸಾರಾಂಗ ಸಂಸ್ಥೆ ಕೊಡುವ ರಾಜ್ಯೋತ್ಸವ ಪ್ರಶಸ್ತಿ, ಬಸವ ರತ್ನ ರಾಷ್ಟ್ರ ಪ್ರಶಸ್ತಿ, ಕನಕ ಸಿರಿ ಪ್ರಶಸ್ತಿ, ಬಸವ ಜ್ಯೋತಿ ರಾಜ್ಯಮಟ್ಟದ ಪ್ರಶಸ್ತಿ, ಕಾಯಕ ಸಿರಿ ಪ್ರಶಸ್ತಿ, ಜಂಗಮೋಪನ್ಯಾಸಕ ಪ್ರಶಸ್ತಿಗಳು ಪ್ರಮುಖವಾಗಿವೆ. ಅವರು ಹಲವಾರು ಸಂಘ-ಸಂಸ್ಥೆಗಳ ಸದಸ್ಯರಾಗಿ, ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 

ಸಿ.ಎಸ್. ಆನಂದ