About the Author

ಹುಟ್ಟಿದ್ದು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಆಲೂರು. ತಂದೆ ಶ್ರೀ ಎ.ಎಚ್.ಲಿಂಗಯ್ಯ, ತಾಯಿ ಶ್ರೀಮತಿ ಅಂಕಮ್ಮ. ಏಳು ಸಹೋದರಿಯರು. ತಂದೆ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್‌ ಆಗಿದ್ದರಿಂದ ರಾಜ್ಯದ ವಿವಿಧ ಕಡೆ ವಿದ್ಯಾಭ್ಯಾಸ. 1980 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ ಎಂ.ಎ. 1981 ರಿಂದ 1990 ರವರೆಗೆ 'ಲಂಕೇಶ್ ಪತ್ರಿಕೆ'ಯಲ್ಲಿ; 1994 ರಿಂದ 1996ರ ವರೆಗೆ 'ಈ ವಾರ ಕರ್ನಾಟಕ'ದಲ್ಲಿ ವರದಿ, ಸಿನಿಮಾ ಅಂಕಣ, ಪ್ರಬಂಧ, ಕಥೆ, ವಿಮರ್ಶೆ ಇತ್ಯಾದಿ ಪ್ರಕಟ. 2000 ಜುಲೈನಿಂದ 'ಹಾಯ್ ಬೆಂಗಳೂರ್!' ಪತ್ರಿಕೆಯಲ್ಲಿ ಪ್ರತಿವಾರ “ಒಲಿದಂತೆ ಹಾಡುವೆ' ಅಂಕಣ. 2000ದಲ್ಲಿ ಅಮೆರಿಕಾ ಮತ್ತು 2002ರಲ್ಲಿ ಈಜಿಪ್ಟ್ ದೇಶಗಳ ಪ್ರವಾಸ. 2001 ರಿಂದ 2004 ರವರೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ, 2006ರಲ್ಲಿ ಈಟಿವಿಗಾಗಿ ನಲವತ್ತೈದು ವಾರ ನಮಸ್ಕಾರ ಕಾರ್ಯಕ್ರಮ. ‘ನಾನು ಒಲಿದಂತೆ ಹಾಡುವೆ' ಮತ್ತು 'ಸಖೀಗೀತ’ ಕೃತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಶ್ರೇಷ್ಠ ಪ್ರಬಂಧ ಸಂಕಲನ ಪುರಸ್ಕಾರ. ಒಂದು `ಒಂದು ಸುಂದರ ಮನಸ್ಸು ಮತ್ತು ಇತರ ಬರಹಗಳ ಕೃತಿಗೆ ಶಿವಮೊಗ್ಗೆಯ ಕರ್ನಾಟಕ ಸಂಘದ ಹಾ.ಮಾ.ನಾ ಅಂಕಣ ಬರಹ ಪ್ರಶಸ್ತಿ. 1982 ರಿಂದ 2017 ರವರೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನಲ್ಲಿ ಉದ್ಯೋಗ, ಪತ್ನಿ ಎಚ್. ವಿಜಯಲಕ್ಷ್ಮಿ ಟಿ.ಸಿ.ಎಸ್.ನಲ್ಲಿ ಹಿರಿಯ ಸಾಫ್ಟ್‌ವೇರ್‌ ಎಂಜಿನಿಯರ್.

ಚಂದ್ರಶೇಖರ್ ಆಲೂರು

Awards