About the Author

ಹಿರಿಯ ಪತ್ರಕರ್ತ ಡಿ.ವಿ. ರಾಜಶೇಖರ ಅವರು ಅಂಕಣಕಾರರು. ಲೇಖಕರು.  ಪ್ರಜಾವಾಣಿ ದಿನಪತ್ರಿಕೆಯಲ್ಲಿ ಸಹಾಯಕ ಸಂಪಾದಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾದ ನಂತರ ಅವರು ವಿಜಯ ಕರ್ನಾಟಕ ದಿನಪತ್ರಿಕೆಗೆ ಸಂಪಾದಕೀಯ ಸಲಹೆಗಾರರಾಗಿ ನೇಮಕಗೊಂಡರು. ನಂತರ ಕನ್ನಡ ಪ್ರಭ ದಿನಪತ್ರಿಕೆ ಹಾಗೂ ದ ಸ್ಟೇಟ್ಸ್‌ ಆನ್‌ಲೈನ್‌ ಪೋರ್ಟಲ್‌ನಲ್ಲಿಯೂ ಸಂಪಾದಕೀಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಅವರು ಕೆಲಕಾಲ ಕನ್ನಡ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಜಾವಾಣಿಯ ವರದಿಗಾರರಾಗಿ ನೇಮಕಗೊಂಡ ನಂತರ ಹುಬ್ಬಳ್ಳಿ, ನವದೆಹಲಿ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದರು. ಮೈಸೂರು ಆವೃತ್ತಿಯ ಮುಖ್ಯಸ್ಥರಾಗಿದ್ದ ಅವರು ಪ್ರಜಾವಾಣಿಯ ಭಾನುವಾರದ ಸಾಪ್ತಾಹಿಕ ಪುರವಣಿಯ ಸಂಪಾದಕರಾಗಿದ್ದರು. ಸದ್ಯ ಮೈಸೂರಿನಿಂದ ಪ್ರಕಟವಾಗುವ ಆಂದೋಲನ ಪತ್ರಿಕೆಯಲ್ಲಿ ಅಂಕಣ ಬರೆಯುತ್ತಿದ್ದಾರೆ.

ಕೃತಿಗಳು: ಅರ್ನೆಸ್ಟೊ ಚೆಗೆವಾರ (ಜೀವನ ಚರಿತ್ರೆ)

ಡಿ.ವಿ. ರಾಜಶೇಖರ್‌