About the Author

ಕವಿ, ಲೇಖಕಿ ದೀಪಾ ಹಿರೇಗುತ್ತಿ ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣದವರು. ಬಾಲ್ಯದಿಂದಲೇ ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಂಡ ಅವರು ಕನ್ನಡದ ಸಶಕ್ತ ಅಂಕಣಗಾರ್ತಿ ಎಂಬುದನ್ನು “ನಾನು, ನೀವು ಮತ್ತು ...” ಅಂಕಣ ಬರಹಗಳ ಮೂಲಕ ಸಾಬೀತು ಪಡಿಸಿದ್ದಾರೆ. 'ಪರಿಮಳವಿಲ್ಲದ ಹೂಗಳ ಮಧ್ಯೆ' ಅವರ ಚೊಚ್ಚಲ ಕವನ ಸಂಕಲನ. ದಸರಾ ಕವಿಗೋಷ್ಠಿ, ಸಂಕ್ರಮಣ, ಪ್ರಜಾವಾಣಿ ಸಂಚಯ, ತಿಂಗಳು ಕವನಸರ್ಧೆಯಲ್ಲಿ ಬಹುಮಾನ, ಪ್ರಜಾವಾಣಿ - ವಿಮೋಚನಾ ಏರ್ಪಡಿಸಿದ ಕವನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. ಜೊತೆಗೆ ಕರ್ನಾಟಕ ಲೇಖಕರ ಸಂಘದಿಂದ ಕೊಡಮಾಡುವ ಗುಡಿಬಂಡೆ ಪೂರ್ಣಿಮಾ ದತ್ತಿ ಪ್ರಶಸ್ತಿಯನ್ನು ಪಡೆದಿದ್ದಾರೆ. 

 

ದೀಪಾ ಹಿರೇಗುತ್ತಿ

(27 Feb 1978)