About the Author

ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಮತ್ತು ಕನ್ನಡದ ಹಿರಿಯ ವಿದ್ವಾಂಸ  ಡಾ. ದೇವರಕೊಂಡಾರೆಡ್ಡಿ ಅವರು ಶಾಸನ, ವಾಸ್ತುಶಿಲ್ಪ ಹಾಗೂ ಇತಿಹಾಸದಲ್ಲಿ ಪರಿಣಿತರು. ಮುನಿಸ್ವಾಮಿ ರೆಡ್ಡಿ ಹಾಗೂ ತಿಮ್ಮಕ್ಕ ದಂಪತಿಗಳ ಮಗನಾಗಿ ಬೆಂಗಳೂರಿನ ಅನೇಕಲ್ ತಾಲೂಕಿನ ವಣಕನಹಳ್ಳಿ ಅವರು 1948ರ ಮೇ 10ರಂದು ಜನಿಸಿದರು. 1971ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ ಪದವಿ ಪಡೆದ ಅವರು 1993 ರಲ್ಲಿ ತಲಕಾಡಿನ ಗಂಗರ ದೇವಾಲಯಗಳು  ಒಂದು ಅಧ್ಯಯನ ಎಂಬ ವಿಷಯದ ಕುರಿತು ಪಿ.ಎಚ್.ಡಿ ಪದವಿ ಪಡೆದರು. ಆರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕೆಲಸ ಮಾಡಿದ ಅವರು, ನಂತರ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ  ಉಪನ್ಯಾಸಕರಾಗಿ, ಪ್ರವಾಚಕರಾಗಿ, ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ, ಸಮಾಜವಿಜ್ಞಾನಗಳ ನಿಕಾಯದ ಡೀನ್ ಆಗಿ ಸೇವೆ ಸಲ್ಲಿಸಿದ್ದಾರೆ.
ಶಾಸನ, ವಾಸ್ತುಶಿಲ್ಪ, ದೇವಾಲಯ, ಲಿಪಿಯ ಹುಟ್ಟು ಬೆಳವಣಿಗೆ ಮುಂತಾದ  ವಿಷಯಕ್ಕೆ ಸಂಬಂಧಪಟ್ಟಂತೆ ಹಲವಾರು ಕೃತಿಗಳನ್ನು, ಅನುವಾದ ಗ್ರಂಥಗಳನ್ನು ರಚಿಸಿ, ಪ್ರಕಟಿಸಿದ್ದಾರೆ. ಸುಮಾರು 60ಕ್ಕೂ ಹೆಚ್ಚು ಲೇಖನಗಳು ಬೇರೆ ಬೇರೆ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಗಂಗರ ಶಿಲ್ಪಕಲೆ, ಶ್ರವಣಬೆಳಗೊಳದ ಬಸದಿಗಳ ವಾಸ್ತುಶಿಲ್ಪ, ಲಿಪಿಯ ಹುಟ್ಟು ಮತ್ತು ಬೆಳವಣಿಗೆ, ಕರ್ನಾಟಕ ಶಾಸನಗಳಲ್ಲಿ ಶಾಪಾಶಯ ಇವರ ಮುಖ್ಯ ಕೃತಿಗಳು.
ಅವರು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು, ಬಿ.ಎಂ ಶ್ರೀ ಸ್ಮಾರಕ ಪ್ರತಿಷ್ಠಾನ ಬೆಂಗಳೂರು, ಕರ್ನಾಟಕ ಇತಿಹಾಸ ಅಕಾಡೆಮಿ ಬೆಂಗಳೂರು, ದಿ ಮಿತಿಹಿಕಾ ಸೊಸೈಟಿ ಬೆಂಗಳೂರು, ಮೈಸೂರು ಎಪಿಗ್ರಾಫಿಕಲ್ ಸೊಸೈಟಿ ಆಫ್ ಇಂಡಿಯಾ ಸಂಸ್ಥೆಗಳರ ಸದಸ್ಯರಾಗಿದ್ದಾರೆ.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ 2018ರ ಸಾಲಿನ ತಾಳ್ತಜೆ ಕೇಶವ ಪ್ರಶಸ್ತಿ ಪಡೆದಿದ್ದಾರೆ.

ದೇವರಕೊಂಡಾ ರೆಡ್ಡಿ

(10 May 1948)