About the Author

 ಪಬ್ಲಿಕ್ ಟಿ ವಿ ಸಿನಿಮಾ ವಿಭಾಗದ ಮುಖ್ಯಸ್ಥರಾದ ಮಹೇಶ ದೇವಶೆಟ್ಟಿ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸ ವಿಭಾಗದಲ್ಲಿ ಸ್ನಾತಕೋತ್ತರ ಪದವಿ (ಎಂ.ಎ೦) ಪದವಿ ಪಡೆದಿದ್ದಾರೆ. ಮೂಲತಃ ಯಾದಗಿರಿ ಜಿಲ್ಲೆಯ ರಂಗಂಪೇಟೆಯವರಾದ ಮಹೇಶ ಅವರ ಹುಟ್ಟಿ-ಬೆಳೆದದ್ದು ಕೊಪ್ಪಳದಲ್ಲಿ. ಧಾರವಾಡದ ಜೆ.ಎಸ್‌.ಎಸ್‌. ಕಾಲೇಜಿನಲ್ಲಿ ಪದವಿ (ಬಿ.ಎ) ವಿದ್ಯಾರ್ಥಿಯಾಗಿದ್ದಾಗಲೇ ಕವಿತೆ ಬರೆಯಲು ಆರಂಭಿಸಿದರು. ಬೆಂಗಳೂರಿನ ಕ್ರೈಸ್ಟ್‌ ಕಾಲೇಜು ಕನ್ನಡ ಸಂಘ ಏರ್ಪಡಿಸಿದ್ದ ಕವನ ಸ್ಪಧೆಯಲ್ಲಿ ಬಹುಮಾನ ಪಡೆದಿರುವ ಮಹೇಶ ಅವರು ’ರೊಟ್ಟಿ ಬೇಯಲು ಪ್ರೇಮದ ಬೂದಿ’ ಎಂಬ ಕವನ ಸಂಕಲನ ಪ್ರಕಟಿಸಿದ್ದಾರೆ.

ಹಾಯ್‌ ಬೆಂಗಳೂರು’ ಪತ್ರಿಕೆಯಲ್ಲಿ ಸಿನಿಮಾ ಪತ್ರಕರ್ತರಾಗಿ ವೃತ್ತಿಜೀವನ ಆರಂಭಿಸಿದ ಮಹೇಶ ಅವರು ನಂತರ ’ವಿಜಯ ಕರ್ನಾಟಕ’ ಪತ್ರಿಕೆಯ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡಿದ್ದರು. 

ದೇವಶೆಟ್ಟಿ ಮಹೇಶ್