About the Author

ಯುವ ಬರಹಗಾರ ದೇವು ಮಾಕೊಂಡ ಅವರು ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದವರು. ಸಿಂದಗಿಯಲ್ಲಿ ಪ್ರೌಢಶಾಲಾ ಶಿಕ್ಷಕರಾಗಿದ್ದಾರೆ. ‘ಬಿಕರಿಗಿಟ್ಟ ಕನಸು, ಹೆಗ್ಗೇರಿಸಿದ್ದ ಚರಿತೆ’ ಅವರ ಪ್ರಕಟಿತ ಕವನ ಸಂಕಲನಗಳು. ಹಲವಾರು ಲೇಖನಗಳು ಕನ್ನಡ ದಿನಪತ್ರಿಕೆಯಲ್ಲಿ ಪ್ರಕಟವಾಗಿವೆ. ಗುರುರತ್ನ, ವಿದ್ಯಾಸಿರಿ ವಿಷಾರದ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ಹಸ್ತಪ್ರತಿ ಬಹುಮಾನ, ಆಕಾಶವಾಣಿ ಭದ್ರಾವತಿಯಿಂದ ಪ್ರತಿಭಾ ಪ್ರಶಂಸಾ ಪ್ರಶಸ್ತಿಗಳು ಲಭಿಸಿವೆ. ಅಲ್ಲದೇ ವಿಜಯಪುರ ಜಿಲ್ಲಾ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮೀರವಾಡಿ ದತ್ತಿ ಪ್ರಶಸ್ತಿಯೂ ದೊರೆತಿದೆ. 

ದೇವು ಮಾಕೊಂಡ