ಪತ್ರಕರ್ತ, ಲೇಖಕ ದೇವು ಪತ್ತಾರ ಅವರು ಜನಿಸಿದ್ದು 1973 ಮೇ 15ರಂದು. ಯಾದಗಿರಿ ಜಿಲ್ಲೆ ಶಹಪುರ ಹುಟ್ಟೂರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಲಿಂಗ್ವಿಸ್ಟಿಕ್ಸ್ ಹಾಗೂ ಟ್ರಾನ್ಸಲೇಷನ್ನಲ್ಲಿ ಡಿಪ್ಲೊಮಾ ಶಿಕ್ಷಣ ಪಡೆದಿದ್ದಾರೆ.
ಪ್ರಜಾವಾಣಿ, ವಿಜಯ ಕರ್ನಾಟಕ ಮುಂತಾದ ಹಲವಾರು ಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪಸಂಪಾದಕ ಹಾಗೂ ಅಂಕಣಕಾರರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ. ಉದ್ಯೋಗ ಖಾತ್ರಿ ಮತ್ತು ವಲಸೆ ಕುರಿತು ಅಧ್ಯಯನ ವರದಿ ಮಂಡಿಸಿರುವ ಇವರು ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಕನಕದಾಸ ಅಧ್ಯಯನ ಮತ್ತು ಸಂಶೋಧನ ಕೇಂದ್ರದಿಂದ ಫೆಲೋಶಿಪ್ ಹಾಗೂ ಗೋಕಾಕ ವಾಙ್ಞಯ ಟ್ರಸ್ಟ್ ನ ಫೆಲೋಶಿಪ್ ಕೂಡ ಸಂದಿರುತ್ತದೆ.
ಕೃತಿಗಳು : ಕ್ಯಾಮರಾ ಇಂಜಿನಿಯರ್ ಗುಲಾಂ ಮುಂತಕಾ, ಮಹಾದೇವ ಬಾಬಾ ಮೆಡೋಸ್ ಟೇಲರ್(ಸಂಪಾದಿತ), ಈಗ ಹೀಗಿರುವ ಲೋಕದಲ್ಲಿ (ವ್ಯಕ್ತಿಚಿತ್ರ), ಬಹಮನಿ ಸಾಮ್ರಾಜ್ಯ, ಎಸಳು(ಸಂಪಾದಿತ).