About the Author

ಜನ್ಮಸ್ಥಳ ರಾಮನಗರ ಜಿಲ್ಲೆಯ ಬೈರಮಂಗಲ. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಿAದ ಕನ್ನಡ ಎಂ.ಎ. ,ಮೈಸೂರು ವಿಶ್ವವಿದ್ಯಾನಿಲಯದಿಂದ `ಕುವೆಂಪು ಕಾವ್ಯ' ಕುರಿತ ಸಂಶೋಧನೆಗೆ ಪಿಎಚ್.ಡಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸ್ನಾತಕೋತ್ತರ ಕೇಂದ್ರಗಳಲ್ಲಿ 35 ವರ್ಷಗಳ ಬೋಧನಾನುಭವ. 

ಕಥೆ, ಕಾದಂಬರಿ, ವಿಮರ್ಶೆ, ಸಂಶೋಧನೆ, ಅಂಕಣ ಬರಹ, ಮಕ್ಕಳ ಸಾಹಿತ್ಯ, ಸಂಪಾದನೆ, ಅಭಿನಂದನೆ ಪ್ರಕಾರಗಳಲ್ಲಿ 40ಕ್ಕೂ ಹೆಚ್ಚು ಕೃತಿಗಳ ಪ್ರಕಟಣೆ. ಸಿವಿಜಿ ಪಬ್ಲಿಕೇಷನ್ಸ್ನಿಂದ `ಕುವೆಂಪು 108 ನೇ ಜನ್ಮ ದಿನಕ್ಕೆ 108 ಕೃತಿಗಳು' ಮಾಲಿಕೆ ಮತ್ತು `ಕುವೆಂಪು ಸಾಹಿತ್ಯ' ಮಾಲಿಕೆಯ 25 ಕೃತಿಗಳ ಸಂಪಾದಕ. 

ಕೆಲವು ಪ್ರಕಟಿತ ಕೃತಿಗಳು : ರಸಸಿದ್ಧಿ, ರಸಗ್ರಹಣ, ರಸಾನುಭೂತಿ, ರಸಲಹರಿ, ರಸಯಾನ, ಸಿಂಧೂರಿ, ಮಾಯಾ ಕಿನ್ನರಿ, ಕೆಂಗಲ್ ಹನುಮಂತಯ್ಯ, ಹಡಪದ ಅಪ್ಪಣ್ಣ, ಈ ಪರಿಯ ಸೊಬಗು, ಜಾನಪದ ದರ್ಶನ, ಜಗತ್ತಿನ ಜನಪದ ಕಥೆಗಳು, ಯೇಸು ಕ್ರಿಸ್ತ, ಮಹಾತ್ಮ ಗಾಂಧಿ, ಬುದ್ಧ, ಸ್ವಾಮಿ ವಿವೇಕಾನಂದ, ನೆಲ್ಸನ್ ಮಂಡೆಲಾ, ಮದರ್ ತೆರೆಸಾ, ಅಲೆಗ್ಸಾಂಡರ್, ಚಾರ್ಲಿ ಚಾಪ್ಲಿನ್.

ಪ್ರಶಸ್ತಿ-ಗೌರವ : ಮೈಸೂರಿನ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ನಿಂದ ವಿಶ್ವಮಾನವ ಪ್ರಶಸ್ತಿ, ಸಹಕಾರ ರತ್ನ ಬಿ.ಎಲ್. ಲಕ್ಕೇಗೌಡ ಪ್ರಶಸ್ತಿ, ಚಿತ್ರದುರ್ಗ ಮುರುಘಾಮಠದ ಮುರುಘಾಶ್ರೀ ಪ್ರಶಸ್ತಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ, ಅಖಿಲ ಕರ್ನಾಟಕ ವಿಚಾರವಾದಿ ಸಂಘದ ಕರ್ನಾಟಕ ಮಹಾ ವಿಚಾರರತ್ನ ಪ್ರಶಸ್ತಿ, ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಜಿ. ನಾರಾಯಣಕುಮಾರ್ ಪ್ರಶಸ್ತಿ, ಎಚ್.ಎ.ಎಲ್. ರಾಜ್ಯೋತ್ಸವ ಪ್ರಶಸ್ತಿ, ಜಿ.ಪಿ. ರಾಜರತ್ನಂ ಸ್ಮರಣಾರ್ಥ ರಾಮನಗರ ರತ್ನ ಪ್ರಶಸ್ತಿ, ಮೈಸೂರಿನ ಬಾಲಚಿಂತನ ಬಳಗದಿಂದ ಕರ್ನಾಟಕ ಸಾಹಿತ್ಯ ಶಿರೋಮಣಿ ಪ್ರಶಸ್ತಿ, ರೋಟರಿ ಮಧುಗಿರಿಯಿಂದ ವೃತ್ತಿ ಸೇವಾ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಿರಿಗನ್ನಡ ಪ್ರಶಸ್ತಿ. 

ರಾಮನಗರ ಜಿಲ್ಲಾ 2ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷತೆಯ ಗೌರವ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸನ್ಮಾನ ಗೌರವ. ಒಂದು ಅವಧಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ. 

ಕನ್ನಡ ಜಾಗೃತಿ ಉಪನ್ಯಾಸ ಮತ್ತು ಕುವೆಂಪು ವಿಚಾರಗಳ ಪ್ರಚಾರದಲ್ಲಿ ಆಸಕ್ತ.

ಬೈರಮಂಗಲ ರಾಮೇಗೌಡ

BY THE AUTHOR