About the Author

ರಾಯಚೂರು ಜಿಲ್ಲೆಯವರಾದ ಎನ್.ಕೆ. ಪದ್ಮನಾಭ  ಅವರು ಸುದ್ದಿಮೂಲ, ವಿಜಯ ಕರ್ನಾಟಕ, ವಿಜಯ ಟೈಮ್ಸ್, ಹಾಗೂ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯಲ್ಲಿ ವರದಿಗಾರ, ಸಹ ಸಂಪಾದಕರಾಗಿ ಕೆಲಸ ಮಾಡಿದ್ದಾರೆ.

ಕುವೆಂಪು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವ ಇವರು ಪ್ರಸ್ತುತ ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳ ನೆಚ್ಚಿನ ಪ್ರಾಧ್ಯಾಪಕರಾಗಿರುವ ಪದ್ಮನಾಭ ಅವರು ವಿದ್ಯಾರ್ಥಿಗಳಿಗೂ ಸಾಹಿತ್ಯಾಸಕ್ತಿ ಬೆಳೆಸುವ ಕಾಯಕದಲ್ಲಿ ತೊಡಗಿದ್ದಾರೆ.

 ಟಿ.ಎಸ್. ನಾಗಾಭರಣ ಅವರ ಚಲನಚಿತ್ರಗಳು: ಒಂದು ವಿಶ್ಲೇಷಣಾತ್ಮಕ ಅಧ್ಯಯನ' ಶೀರ್ಷಿಕೆಯಲ್ಲಿ ಸಿದ್ಧಪಡಿಸಿದ್ದ ಸಂಶೋಧನ ಮಹಾಪ್ರಬಂಧವನ್ನು 'ಅನನ್ಯ ಹಾದಿಯ ಹೆಜ್ಜೆಗಳು' ಮೂಲಕ ಕೃತಿಯ ರೂಪಕ್ಕಿಳಿಸಿದ್ದಾರೆ. ದಿಗ್ದರ್ಶಕ ಧ್ವನಿ ಇವರ ಮತ್ತೊಂದು ಕೃತಿಯಾಗಿದೆ. 

ಎನ್. ಕೆ. ಪದ್ಮನಾಭ