About the Author

ಈ. ಬಸವರಾಜು ಇಂಜಿನಿಯರಿಂಗ್ ಪದವೀಧರರಾಗಿದ್ದಾರೆ. ತಮ್ಮ ವಿದ್ಯಾರ್ಥಿ ದೆಸೆಯಿಂದಲೂ ಬಹುಮುಖಿಯಾಗಿ ತೊಡಗಿಸಿಕೊಂಡಿರುವ ಇವರು ಹವ್ಯಾಸಿ ಬರಹಗಾರರಾಗಿದ್ದಾರೆ. ವೈಜ್ಞಾನಿಕ ಚಿಂತನೆ ಹಾಗೂ ವೈಚಾರಿಕತೆಗೆ ಸಂಬಂಧಿಸಿದ ಇವರ ಲೇಖನಗಳು ನಾಡಿನ ಹಲವಾರು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. - ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕರ್ನಾಟಕ ವಿಚಾರವಾದಿಗಳ ವೇದಿಕೆ-ಹೀಗೆ ನಾನಾ ಸಂಘಟನೆ ಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಂಡಿರುವ ಇವರು  ಖಗೋಳಯಾನ, ಸುವರ್ಣ ವಿಜ್ಞಾನೋತ್ಸವ, ಜನರೆಡೆಗೆ ವಿಜ್ಞಾನ ಜಾಥಾ, ಜೀವ ವೈವಿಧ್ಯ ದಾಖಲಾತಿ, ಇನ್ನೂ ಮುಂತಾದ ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುತ್ತಾ ಬಂದಿದ್ದಾರೆ.  ’ಶಿಕ್ಷಣ ಶಿಲ್ಪಿ' ಎಂಬ ಶೈಕ್ಷಣಿಕ ಮಾಸಪತ್ರಿಕೆಯ ಪ್ರಕಾಶನದ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಇವರು ವಿಜ್ಞಾನವನ್ನು ಜನಪ್ರಿಯಗೊಳಿಸುವ, ವೈಜ್ಞಾನಿಕ ಚಿಂತನೆ, ವೈಚಾರಿಕತೆ ಬೆಳೆಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಈ. ಬಸವರಾಜು

(01 Jan 1965)