About the Author

ದಕ್ಷಿಣ ಕನ್ನಡ ಜಿಲ್ಲೆಯ ಪುಟ್ಟ ಹಳ್ಳಿಯಾಗಿರುವ ಪೆರ್ನೆಯ ಅಬ್ದುಲ್ ರಶೀದ್ ಮತ್ತು ಆಯಿಶಾ ದಂಪತಿಯ ಮಗಳು. ಕಲ್ಲಡ್ಕ, ಪೆರ್ನೆ, ಉಪ್ಪಿನಂಗಡಿ, ಪುತ್ತೂರು ಗಳಲ್ಲಿ ವಿದ್ಯಾಭ್ಯಾಸ. ಇನ್ಫಾರ್ಮೇಶನ್ ಟೆಕ್ನಾಲಜಿಯಲ್ಲಿ ಎಂಬಿಎ ಪದವೀಧರೆ. ಗೃಹಿಣಿ. 2020ರಲ್ಲಿ ಸುಧಾ ಯುಗಾದಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, 2021ರಲ್ಲಿ ಮೊಗವೀರ ಸಾಹಿತ್ಯ ಪ್ರಶಸ್ತಿ, 2022ರಲ್ಲಿ ಸಮಾಜಮುಖಿ ಕಥಾಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಮತ್ತು ಅಪ್ರಕಟಿತ ಕವನ ಸಂಕಲನಕ್ಕಾಗಿ ವಿದ್ಯಾಧರ ಪ್ರತಿಷ್ಠಾನ ಕೊಡಮಾಡುವ ದ‌‌.ರಾ. ಬೇಂದ್ರೆ ಸಾಹಿತ್ಯ ಪ್ರಶಸ್ತಿ ದೊರಕಿದೆ. ಇವರ 'ಕಡಲು ನೋಡಲು ಹೋದವಳು' ಕೃತಿಗೆ ಲಂಕೇಶ್ ಪ್ರಶಸ್ತಿ ಮತ್ತು ಅವ್ವ ಪ್ರಶಸ್ತಿ 2023ರಲ್ಲಿ ದೊರಕಿದೆ. 2023ರಲ್ಲಿ ಸಂಕಥನ 'ಒಡೆಯಲಾರದ ಒಡಪು' ಕಥಾಸಂಕಲನ ಪ್ರಕಟಿಸಿದೆ.

ಕೃತಿಗಳು: ಕಡಲು ನೋಡಲು ಹೋದವಳು, ಒಡೆಯಲಾರದ ಒಡಪು, ಅವಳ ಕಾಲು ಸೋಲದಿರಲಿ

 

ಫಾತಿಮಾ ರಲಿಯಾ