About the Author

ಪತ್ರಕರ್ತ, ಲೇಖಕ ಜಿ.ಎನ್. ಮೋಹನ್ ಕನ್ನಡ ಪತ್ರಿಕೋದ್ಯಮದ ಪ್ರಮುಖರಲ್ಲೊಬ್ಬರು. ಪತ್ರಿಕೆ, ಎಲೆಕ್ಟ್ರಾನಿಕ್ ಹಾಗೂ ಆನ್ ಲೈನ್ ಮೂರು ಮಾಧ್ಯಮಗಳಲ್ಲಿ ನುರಿತವರು. ಬೆಂಗಳೂರು ವಿಶ್ವವಿದ್ಯಾಲಯದಿಂದ ನಾಟಕದಲ್ಲಿ ಮೊದಲ ರ್ಯಾಂಕ್ ನೊಂದಿಗೆ ಪದವಿ ಹಾಗೂ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಪ್ರಜಾವಾಣಿಯ ವರದಿಗಾರರಾಗಿ, ಈಟಿವಿ ಚಾನಲ್ ನ ಹಿರಿಯ ಸಂಪಾದಕರಾಗಿ, ಸಮಯ ಚಾನಲ್ ಹಾಗೂ ಅವಧಿಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 'ಸೋನೆಮಳೆಯ ಸಂಜೆ', 'ಪ್ರಶ್ನೆಗಳಿರುವುದು ಶೇಕ್ಸ್ ಪಿಯರನಿಗೆ' ಕವನ ಸಂಕಲನಗಳು, 'ನನ್ನೊಳಗಿನ ಹಾಡು ಕ್ಯೂಬಾ' (ಪ್ರವಾಸ ಕಥನ), 'ಕಾಫಿ ಕಪ್ಪಿನೊಳಗೆ ಕೊಲಂಬಸ್'(ವಿಚಾರ ಕಥನ) ಇವರ ಪ್ರಮುಖ ಕೃತಿಗಳು.

ಸಾಹಿತ್ಯ, ನಾಟಕ, ಮಾಧ್ಯಮ ಅಕಾಡೆಮಿ, ಕರ್ನಾಟಕ ರಾಜ್ಯ ಅಭಿವೃದ್ಧಿ ಪತ್ರಿಕೋದ್ಯಮ ಪುರಸ್ಕಾರ, ಪು.ತಿ.ನ ಹಾಗೂ ಸಂದೇಶ ಪ್ರಶಸ್ತಿ ಇವರಿಗೆ ಸಂದಿದೆ.  

ಜಿ.ಎನ್. ಮೋಹನ್