About the Author

ಕತೆಗಾರ್ತಿ ಜಿ.ಎಸ್. ಸುಶೀಲಾದೇವಿ ಆರ್.ರಾವ್ ಅವರು 1952 ರ ಜುಲೈ 5 ರಂದು  ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ  ಗುಂಜಿಗನೂರುನಲ್ಲಿ ಜನಿಸಿದರು. ತಂದೆ ಜಿ. ಶ್ರೀನಿವಾಸಯ್ಯ, ತಾಯಿ ಜಾನಕಮ್ಮ.’ಸ್ವಾಭಿಮಾನಿ, ಮನ ಮಂದಿರ, ಬೆಂಕಿಯ ಒಡಲಲ್ಲಿ, ಸಂಬಂಧದ ಸಂಕೋಲೆಗಳು, ಸೇಡು, ನಿನ್ನ ದಾರಿಯಲ್ಲೀಗ ನನ್ನ ಹೆಜ್ಜೆ’ ಅವರ ಕಾದಂಬರಿಗಳು. ’ಷೋಕೇಸಿನ ಗೊಂಬೆ, ಬದುಕ ಮನ್ನಿಸು ಪ್ರಭುವೆ, ಅಪರಿಮಿತ’ ಕಥಾಸಂಕಲನ ರಚಿಸಿದ್ದಾರೆ. ’ಕಂಪ್ಲಿ ರಾಜ್ಯೋತ್ಸವ ಪ್ರಶಸ್ತಿ, ಮಾಸ್ತಿ ಸ್ಮಾರಕ ಪ್ರಶಸ್ತಿ, ದಾವಣಗೆರೆ ಜಿಲ್ಲಾ 'ವನಿತಾ ಸಾಹಿತ್ಯಶ್ರೀ' ಪ್ರಶಸ್ತಿ’ ಲಭಿಸಿವೆ. 

ಜಿ.ಎಸ್. ಸುಶೀಲಾದೇವಿ ಆರ್.ರಾವ್

(05 Jul 1952)