About the Author

ಲೇಖಕಿ ಗೀರ್ವಾಣಿ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸಮೀಪದ ಹಾರೂಗಾರಿನವರು. ಸಾಹಿತ್ಯ, ಸಂಗೀತದ ವಾತಾವರಣದಲ್ಲಿ ಬೆಳೆದಿದ್ದು, ಶಿರಸಿಯಲ್ಲೇ ಬಿ.ಕಾಂ.ಪದವೀಧರರು. ಮೈಸೂರಿನಲ್ಲಿ ಪತ್ರಿಕೋದ್ಯಮ ಪದವಿ ಪೂರ್ಣಗೊಳಿಸಿದರು. ಸಂಯುಕ್ತ ಕರ್ನಾಟಕದಲ್ಲಿ ಉಪಸಂಪಾದಕಿಯಾಗಿ ಜೊತೆಗೆ, ಟಿ.ವಿ.ಧಾರಾವಾಹಿಗಳಿಗೆ ಚಿತ್ರಕಥೆ, ಸಂಭಾಷಣೆಗಳ ಬರವಣಿಗೆಯಲ್ಲಿ ತೊಡಗಿದ್ದಾರೆ. 

ನಮ್ಮಮ್ಮ ಶಾರದೆ, ಚಿ.ಸೌ.ಸಾವಿತ್ರಿ, ಅಂಜುಮಲ್ಲಿಗೆ, ಚಿತ್ರಲೇಖ, ಇದೇ ಪ್ರೀತಿ ಪ್ರೇಮ ಮುಂತಾದ ಟೆಲಿವಿಷನ್ ಧಾರಾವಾಹಿಗಳಲ್ಲಿ ಬರವಣಿಗೆ ಮಾಡಿದ್ದಾರೆ. ಕವನ, ಲೇಖನಗಳು ಪ್ರವಾಸ ಕಥನಗಳ ಬರಹಗಳು ಇವೆ. ವಿದ್ಯುನ್ಮಾನ ಮಾಧ್ಯಮದ ಪ್ರೊಡಕ್ಷನ್ ವಿಭಾಗದಲ್ಲೂ ಕೆಲಸ ಮಾಡಿದ್ದಾರೆ.

ಕೃತಿಗಳು: ಚಂದಮಾಮನ ಭೂಮಿ ಟೂರ್ , ಅಂಕೋರ್ ವಾಟ್ (ಪ್ರವಾಸ ಕಥನ)

ಗೀರ್ವಾಣಿ

Stories/Poems