About the Author

ಬರಹಗಾರ್ತಿ ಗೀತಾ ಕುಂದಾಪುರ ಅವರು ಜನಿಸಿದ್ದು 1967 ಜೂನ್‌ 23ರಂದು ಎಂಕಾಂ ಪದವಿ ಪಡೆದಿರುವ ಇವರು ವಿದೇಶಗಳಲ್ಲಿ ಪ್ಲಾನರ್‌ ಮತ್ತು ಪ್ರಾಜೆಕ್ಟ್ ಕಂಟ್ರೋಲರ್‌ ಆಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿದ್ದಾರೆ. ಕಾಲೇಜು ದಿನಗಳಿಂದಲೇ ಸಾಹಿತ್ಯಾಸಕ್ತರಾಗಿದ್ದ ಇವರು ವಿವಿಧ ದಿನಪತ್ರಿಕೆ ಹಾಗೂ ನಿಯತಕಾಲಿಕೆಗಳಿಗೆ ಲೇಖನ ಕತೆಗಳನ್ನು ಬರೆಯುವ ಹವ್ಯಾಸದಲ್ಲಿ ತೊಡಗಿಸಿಕೊಂಡಿದ್ದರು. ಇವರು ಬರೆದ ಸಣ್ಣ ಕತೆಗಳು ಹಲವಾರು ನಿಯತಕಾಲಿಕೆಗಳಲ್ಲಿ ಪ್ರಕಟವಾಗಿದ್ದು ‘ಅಪ್ರಮೇಯ’ ಶೀರ್ಷಿಕೆಯಡಿ ಪುಸ್ತಕವಾಗಿ ಪ್ರಕಟಗೊಂಡಿದೆ. ಇವರ ಇನ್ನೊಂದು ಕೃತಿ ದ್ವೀಪಗಳತ್ತ ಯಾನ - ಜಪಾನ್ ಮತ್ತು ಆಸ್ಟ್ರೇಲಿಯಾ ಪ್ರವಾಸ ಕಥನ.

ಗೀತಾ ಕುಂದಾಪುರ

(23 Jun 1967)