About the Author

ಹಿರಿಯ ಪತ್ರಕರ್ತರಾದ ಗೋಪಾಲಕೃಷ್ಣ ಕುಂಟಿನಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಉಪ್ಪಿನಂಗಡಿಯವರು. ಕತೆಗಾರರಾಗಿರುವ ಗೋಪಾಲಕೃಷ್ಣ ಅವರು  “ವೃತ್ತಾಂತ ಶ್ರವಣವು”,  “ಆಮೇಲೆ ಇವನು”, ‘ಅಪ್ಪನ ನೀಲಿಕಣ್ಣು’, ‘ಪೂರ್ಣ ತೆರೆಯದ ಪುಟಗಳು’, “ವಿಲೇಜ್ ವರ್ಲ್ಡು ಮತ್ತು 24 ಕತೆಗಳು”, “ಮಾರಾಪು”ಎಂಬ ಕತೆಗಳ ಸಂಕಲನ ಮತ್ತು “ಈ ಚಳಿಗಾಲದಲ್ಲಿ ಅವಳು ಸಿಕ್ಕಿ” ಎಂಬ ಕವನ ಸಂಕಲನ  ಪ್ರಕಟಿಸಿದ್ದಾರೆ. “ಪುರುಷಾವತಾರ” ಅವರ ಕಾದಂಬರಿ. “ವಂಡರ್ ವೈ ಎನ್ ಕೆ” ಮತ್ತು “ಮಳೆಯಲ್ಲಿ ನೆನೆದ ಕತೆಗಳು” ಅವರ ಸಂಪಾದಿತ ಕೃತಿಗಳು. 

ಪತ್ರಕರ್ತ ಗೆಳೆಯ ಜೋಗಿ (ಗಿರೀಶರಾವ್‌ ಹತ್ವಾರ) ಅವರೊಂದಿಗೆ ಸೇರಿ ಆರಂಭಿಸಿದ ’ಕಥಾಕೂಟ’ವು ಕತೆಗಳ ರಚನೆ-ಚರ್ಚೆಗೆ ಅನುವು ಮಾಡಿಕೊಟ್ಟಿದೆ.

ಗೋಪಾಲಕೃಷ್ಣ ಕುಂಟಿನಿ