About the Author

ಕನ್ನಡಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಗೌಡಗೆರೆ ಮಾಯುಶ್ರೀ, ನಂತರ ಕನ್ನಡಕಟ್ಟಾಳು ವೈಶ್ರೀನಿವಾಸರ ನೇತೃತ್ವದ ವೀರಸೇನಾನಿ ಮ॥ ರಾಮಮೂರ್ತಿ ಕನ್ನಡ ಬಳಗದ ಗೌರವ ಕಾರ್ಯದರ್ಶಿಯಾಗಿ ಅನೇಕ ಕನ್ನಡ ಪರ ಹೋರಾಟ ಮತ್ತು ನಾಡು ನುಡಿ ನೆಲ ಜಲ ಪರವಾದ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯನಾಗಿ, ಗಾಂಧಿನಗರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಮೂರು ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ.. ಇವರು ಬರೆದ ಬಿಡಿ ಬಿಡಿ ಕವನಗಳು ನಾಡಿನ ಹೆಸರಾಂತ ಪತ್ರಿಕೆಗಳಾದ ಕರ್ಮವೀರ, ರಾಗಸಂಗಮ ಪ್ರಿಯಾಂಕ, ಮಾರ್ದನಿ, ಚಾಣಗೆರೆ ಪತ್ರಿಕೆ, ಬಹುಜನ ಕನ್ನಡಿಗರು, ಈ ಭಾನುವಾರ, ವಾರ್ತಾಭಾರತಿ ಮುಂತಾದ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಕೃತಿಗಳು: ಮೊಳಕೆ ಕಾಳು (ಲೇಖನ ಸಂಗ್ರಹ), ನೆಲದ ಚಿಗುರು(ಕವನ ಸಂಕಲನ), ಮಾತಿನ ಮಂಟಪ (ವಿಡಂಬನಾತ್ಮಕ ಹರಟೆ ಸಂಗ್ರಹ)

ಗೌಡಗೆರೆ ಮಾಯುಶ್ರೀ