About the Author

ಲೇಖಕ, ಗಾಯಕ, ನಾಟಕಕಾರ ಎಚ್. ಎಂ. ನಾಗರಾಜರಾವ್ ಕಲ್ಕಟ್ಟೆ ಪ್ರಸ್ತುತ ಚಿಕ್ಕಮಗಳೂರು ತಾಲ್ಲೂಕು ಕಳಸಾಪುರದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರು. ವಿದ್ಯಾರ್ಥಿ ಜೀವನದಲ್ಲಿ ಇವರು ಕಲಿಕೆಯಲ್ಲಿ ಚಿನ್ನದ ಪದಕಗಳನ್ನು ಗಳಿಸಿದವರು. ಸಾಹಿತ್ಯ, ಸಂಗೀತ, ಅಭಿನಯ, ಸಾಂಸ್ಕೃತಿಕ ಸಂಘಟನೆ, ಸಮಾಜಸೇವೆ, ಧಾರ್ಮಿಕ ಸೇವೆ ಹೀಗೆ ಹಲವು ಕ್ಷೇತ್ರಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರು. ಅವರ ಸಾಹಿತ್ಯವಿರುವ ನೂರಕ್ಕೂ ಹೆಚ್ಚು ಅಡಕ ಮುದ್ರಿಕೆಗಳು ಲೋಕಾರ್ಪಣೆಗೊಂಡಿವೆ. ಕಾಂತಾವರ ಕನ್ನಡ ಸಂಘವೇ ಪ್ರಕಟಿಸಿದ 'ಕನ್ನಡ ಕೋಗಿಲೆ ಪಿ. ಕಾಳಿಂಗರಾವ್' ಹಾಗೂ ’ಪ್ರಥಮ ಪುಟ’, ’ಬೆಳಕು’ ಪುಸ್ತಕವೂ ಸೇರಿ ಈವರೆಗೆ ಇಪ್ಪತ್ತು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಆರು ಕೃತಿಗಳನ್ನು ಸಂಪಾದಿಸಿದ್ದಾರೆ. ರಾಜ್ಯ ಹೊರರಾಜ್ಯಗಳಲ್ಲಿ ನೂರಾರು ಸುಗಮ ಸಂಗೀತ ಗಾಯನ ತರಬೇತಿ ಶಿಬಿರ ನಡೆಸಿ, ಸಂಗೀತ ಕಾರ್ಯಕ್ರಮ ನೀಡಿದ್ದಾರೆ. ಕನ್ನಡದ ವಿವಿಧ ವಾಹಿನಿಗಳಲ್ಲಿ ಕಿರುತೆರೆಯ ಧಾರಾವಾಹಿ ಎಪಿಸೋಡ್‌ಗಳಲ್ಲಿ ನಟಿಸಿ, ಮೂವತ್ತಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಪ್ರಸ್ತುತ ರಾಜ್ಯ ನಾಟಕ ಅಕಾಡೆಮಿಯ ಸದಸ್ಯರು. 

ಎಚ್.ಎಂ. ನಾಗರಾಜರಾವ್ ಕಲ್ಕಟ್ಟೆ