About the Author

 

ಕವಯತ್ರಿ, ಬರಹಗಾರ್ತಿ ಹೇಮಾ ಪಟ್ಟಣಶೆಟ್ಟಿ ಅವರು ಮನೋವಿಜ್ಞಾನ ಹಾಗೂ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಬರೆದಿರುವ ಪ್ರಮುಖ ಕೃತಿಗಳೆಂದರೆ ವಿರಹೋತ್ಸವ, ಹೊಸಹಾಡು, ಕಣ್ಣುಗಳಲಿ ಕನಸು ತುಂಬಿ, ಮುಸುಕಿದೀ ಮಬ್ಬಿನಲಿ, ಬಗಾಟ ಬಗರಿ, ತುಂಟ ಮಕ್ಕಳ ತಂಟೆ, ಹೆಣ್ಣು. ವಿಮರ್ಶೆ/ವಿಚಾರ ಸಾಹಿತ್ಯ : ಮರ್ಯಾದೆಯ ಮುಸುಕಿನಲ್ಲಿ, ಅನುಲೇಖ ಮುಂತಾದವು. ಸಾಹಿತ್ಯ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆಗೆ ಅಂತರರಾಷ್ಟ್ರೀಯ ಮಹಿಳಾ ವರ್ಷದ ಪ್ರಶಸ್ತಿ, ರತ್ನಮ್ಮ ಹೆಗ್ಗಡೆ ಪ್ರಥಮ ಬಹುಮಾನ, ಮಲ್ಲಿಕಾ ಪ್ರಶಸ್ತಿ ಮುಂತಾದ ಹಲವಾರು ಪ್ರಶಸ್ತಿಗಳು ಸಂದಿವೆ. 

ಅನನ್ಯ ಪ್ರಕಾಶನ ಸ್ಥಾಪಿಸಿ 90ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಸಂಕಲನ ಸಾಹಿತ್ಯ ಪತ್ರಿಕೆ ಸಂಪಾದಕರಾಗಿದ್ದರು. 

ಹೇಮಾ ಪಟ್ಟಣಶೆಟ್ಟಿ

(10 Feb 1954)

BY THE AUTHOR