About the Author

ಹೊರಪೇಟೆ ಮಲ್ಲೇಶಪ್ಪ ಅವರು ಕೊಪ್ಪಳ ಜಿಲ್ಲೆಯ ಮೋರನಹಳ್ಳಿ ಗ್ರಾಮದವರು. ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಹೊನ್ನಾಣ, ಹರಿಹರ, ಭದ್ರಾವತಿ, ಶಿಗ್ಗಾವಿ ತಾಲೂಕಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಹಿಂದು ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮತ್ತು ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಕನಕದಾಸರ, ಸಂಗೊಳ ರಾಯಣ್ಣ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಸಾಹಿತ್ಯ ಪ್ರಕಟಣೆ, ಪ್ರಚಾರಕ್ಕೆ ಕೊಡುಗೆಯನ್ನು ನೀಡಿದ್ದಾರೆ.

ಕೃತಿಗಳು: ಕನಕನ ಹೆಜ್ಜೆ, ಹಂತಿ

ಹೊರಪೇಟೆ ಮಲ್ಲೇಶಪ್ಪ