About the Author

ಲೇಖಕ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ್ ಅವರು ಮೂಲತಃ ತುಮಕೂರು ಜಿಲ್ಲಿಯ ಕುಣಿಗಲ್ ತಾಲ್ಲೂಕಿನ ಹುಲಿಯೂರುದರ್ಗದವರು. ಹುಟ್ಟಿದ್ದು 1976 ಅಕ್ಟೋಬರ್‌ 24ರಂದು. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸುವತ್ತ ಹೆಜ್ಜೆ ಹಾಕುತ್ತಿದ್ದು, ಗ್ರಾಮೀಣ ಬದುಕಿನ ಚಿತ್ರವನ್ನು ಹೆಕ್ಕಿ ತಮ್ಮ ಕೃತಿಗಳಲ್ಲಿ ನೈಪುಣ್ಯವಾಗಿ ಕಟ್ಟಿಕೊಡುತ್ತಾರೆ. ಅವರ ಮೊದಲ ಕವನ ಸಂಕಲನ ‘ಸಂಕೋಲೆ’ 2005ರಲ್ಲಿ ಪ್ರಕಟಣೆ ಕಂಡಿತು. ನಂತರ ‘ಕರುನಾಡಿಗೆನ್ನ ನಮನ, ನಾಡಪ್ರಭು ಕೆಂಪೇಗೌಡ ಮತ್ತು ಇತರ ನಾಟಕಗಳು, ಕನಸುಗಳು ಹೊತ್ತವರು ಹಾಗೂ ಇತರ ಕತೆಗಳು, ಹಳೇವೂರ ಮಡಿಲು, ಹುಲಿಯೂರ ಸೊಗಡು’ ಅವರ ಪ್ರಮುಖ ಕೃತಿಗಳು.

ಪ್ರತಿ ತಿಂಗಳು ಸಾಹಿತ್ಯ ಸ್ಪರ್ಧೆಯನ್ನು ಏರ್ಪಡಿಸುತ್ತಾ ಬಂದಿದ್ದಾರೆ. ‘ಕಾಮಧೇನು, ದೇವರಲ್ಲಿ ಧರ್ಮವಿಲ್ಲ, ಬಲಿಜ ದರ್ಪಣ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ‘ಸಾಹಿತ್ಯಕ ಪ್ರಶಸ್ತಿ, ರಾಜ್ಯಮಟ್ಟದ ಉತ್ತಮ ಸಂಘಟಕ ಪ್ರಶಸ್ತಿ, ರಾಜ್ಯಮಟ್ಟದ ಉತ್ತಮ ಆಯೋಜಕ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಯುವಕವಿ ಪ್ರಶಸ್ತಿ’ ಲಭಿಸಿವೆ.

ಹುಲಿಯೂರುದುರ್ಗ ಲಕ್ಷ್ಮೀನಾರಾಯಣ್

(24 Oct 1976)