About the Author

ತಮ್ಮ ಮಾಂತ್ರಿಕ ಬರಹದಿಂದ ಓದುಗ ಬಳಗವನ್ನು ಸೃಷ್ಟಿಸಿಕೊಂಡ ಲೇಖಕ ವಿ.ಆರ್.ಶ್ಯಾಂ. ಇಂದಿರಾತನಯ ಎಂಬ ಕಾವ್ಯನಾಮದಲ್ಲಿ ಕಾದಂಬರಿಗಳನ್ನು ಬರೆದ ಇವರು ಸುಮಾರು 50ಕ್ಕೂ ಹೆಚ್ಚು ಕಾದಂಬರಿ ಹಾಗೂ ಕಥಾ ಸಂಕಲನಗಳನ್ನು ಪ್ರಕಟಿಸಿದ್ದಾರೆ.ತಾಂತ್ರಿಕ ವಿಷಯದ ಬಗ್ಗೆ ಕುತೂಹಲಕಾರಿ ಕಾದಂಬರಿಗಳನ್ನು ರಚಿಸಿರುವ ಇಂದಿರಾತನಯ ತಮ್ಮ ಪ್ರಯೋಗಶೀಲತೆಯಿಂದ ಕನ್ನಡ ಕಥಾ ಸಾಹಿತ್ಯಕ್ಕೆ ಹೊಸ ಆಯಾಮ ಮೂಡಿಸಿದವರು. ಅವರ ಶಾಕ್ತ್ಯಪಂಥದ ಪ್ರಯೋಗಶೀಲ ಕೃತಿಗಳಾದ ‘ಮಂತ್ರಶಕ್ತಿ’, ಶಕ್ತಿಪೂಜೆ, ಸೇಡಿನಕಿಡಿ, ಹಾಗೂ ಪೂಜಾತಂತ್ರ ಅತ್ಯಂತ ಜನಪ್ರಿಯ ಕಾದಂಬರಿಗಳು. ಅವರ ‘ಚಕ್ರಾಯಣ’ ಸ್ವಾಮಿ ರಮಾನಂದರ ಹಿಮಾಲಯದ ತಪ್ಪಲಿನಲ್ಲಿ ಕೃತಿ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿತ್ತು.

ಇಂದಿರಾತನಯ (ವಿ.ಆರ್.ಶ್ಯಾಂ)