About the Author

ಲೇಖಕಿ ಜಯಶ್ರೀ ದೇಶಪಾಂಡೆ  ಅವರು ಮೂಲತಃ ವಿಜಯಪುರದವರು. ಮನಃಶಾಸ್ತ್ರ ಹಾಗೂ ಇಂಗ್ಲಿಷ್ ನಲ್ಲಿ ಸ್ನಾತಕೋತ್ತರ ಪದವೀಧರರು. ದೇಶ ಸುತ್ತುವುದರ ಜೊತೆಗೆ ಅಲ್ಲಿಯ ಜನ, ಭಾಷೆ, ಆಹಾರ, ಸಂಸ್ಕೃತಿಯನ್ನು ತಮ್ಮ ಲೇಖನಗಳ ಮೂಲಕ ಪರಿಚಯಿಸುತ್ತಿದ್ದಾರೆ. 

ಕೃತಿಗಳು : ಪದ್ಮಿನಿ, ಮೂರನೆಯ ಹೆಜ್ಜೆ, ರೇಖೆಗಳ ನಡುವೆ, ಸ್ಥವಿರ ಜಂಗಮಗಳಾಚೆ ಹಾಗೂ ಉತ್ತರಾರ್ಧ (ಕಥಾ ಸಂಕಲನಗಳು), ಯತ್ಕಿಂಚಿತ್ (ಕವನ ಸಂಕಲನ),ಮಾಯಿ   ಕೆಂದಾಯಿ  ಸ್ಮೃತಿ ಲಹರಿ (ಲಲಿತ ಪ್ರಬಂಧ ಸಂಕಲನ)  ಹೌದದ್ದು ಅಲ್ಲ‌ ಅಲ್ಲದ್ದು ಹೌದು (ಹಾಸ್ಯಲೇಖನ ಸಂಕಲನ), ಕಾಲಿಂದಿ (ಮಯೂರ), ಕೆಂಪು ಹಳದಿ ಹಸಿರು (ತರಂಗ), ದೂರ ದಾರಿಯ ತೀರ (ತರಂಗ) , ಬೇವು‌ (ವಿಜಯ ಕರ್ನಾಟಕ),  ಚಕ್ರವಾತ (ನೂತನ), ಸರಸ್ವತಿ ಕಾಯದ ದಿನವಿಲ್ಲ. (ಉದಯವಾಣಿ)   ಇವು ಧಾರಾವಾಹಿಯಾಗಿ ವಿವಿಧ ಪತ್ರಿಕೆಗಳಲ್ಲಿ ಪ್ರಕಟಿತ ಕಾದಂಬರಿಗಳು.:ಪ್ರಥಮ್ ಬುಕ್ಸ್ ಸಂಸ್ಥೆಗಾಗಿ ಸ್ವಂತ  ಕಥೆಗಳಲ್ಲದೆ ಮರಾಠೀ ಮತ್ತು ಇಂಗ್ಲಿಷ್ಶ್ ಭಾಷೆಗಳಿಂದ ಕನ್ನಡಕ್ಕೆ  ಭಾವಾನುವಾದ ಮಾಡಿದ ನಲವತ್ತರಷ್ಟು ಪುಸ್ತಕಗಳು  ಪ್ರಕಟವಾಗಿವೆ. 

ಪ್ರಶಸ್ತಿ-ಗೌರವ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ತಾಲೂಕು ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿಯ ಅಧ್ಯಕ್ಷತೆ , ದೂರದರ್ಶನ, ಉದಯ ಟಿವಿ  ವಾಹಿನಿಗಳಲ್ಲಿ  ಸಂದರ್ಶನ, *ಅಕ್ಷರ ಪ್ರತಿಷ್ಠಾನದ ಮಕ್ಕಳ  "ಕಲಿಕಾ ಏಣಿ" ಯೋಜನೆಯ ಮಾರ್ಗದರ್ಶಕರಾಗಿದ್ದರು.  ಕನ್ನಡ ಸಾಹಿತ್ಯ ಪರಿಷತ್ತಿನ ನೀಲಗಂಗಾ ಪ್ರಶಸ್ತಿ. (ಯತ್ಕಿಂಚಿತ್- ಕವನ ಸಂಕಲನಕ್ಕೆ ),  ಕರ್ನಾಟಕ ಲೇಖಕಿಯರ ಸಂಘ ಕೊಡಮಾಡುವ 'ಸುಧಾ ಮೂರ್ತಿ ತ್ರಿವೇಣಿ ಸಾಹಿತ್ಯ ಪ್ರಶಸ್ತಿ'  (ಸ್ಥವಿರ ಜಂಗಮಗಳಾಚೆ' ಕಥಾ ಸಂಕಲನಕ್ಕೆ),  ಅತ್ತಿಮಬ್ಬೆ ಪ್ರಶಸ್ತಿ.  (ಹೌದದ್ದು ಅಲ್ಲ ಅಲ್ಲದ್ದು ಹೌದು- ಲಲಿತ ಪ್ರಬಂಧ ಸಂಕಲನಕ್ಕೆ), ಗೋರೂರು ಪ್ರತಿಷ್ಠಾನದ 'ಶ್ರೇಷ್ಠ ಪುಸ್ತಕ'  ಪ್ರಶಸ್ತಿ.( ಮೂರನೆಯ ಹೆಜ್ಜೆ- -ಕಥಾಸಂಕಲನಕ್ಕೆ), ರಾಜ್ಯಮಟ್ಟದ ಕಾದಂಬರಿ ವಿಮರ್ಶಾ ಪ್ರಶಸ್ತಿ.  ಅತ್ತಿಮಬ್ಬೆ ಪ್ರತಿಷ್ಠಾನದಿಂದ.  (ಬೆಳಗಾಂವಕರ್ ನಾಸು- ಕಾದಂಬರಿ‌ ಸುನಂದಾ -  ವಿಮರ್ಶೆ),  ದಿ. ಸಿ ಎನ್ ಜಯಲಕ್ಷ್ಮೀದೇವಿ (ಕಥಾಪ್ರಶಸ್ತಿ) 
         

 

ಜಯಶ್ರೀ ದೇಶಪಾಂಡೆ