About the Author

ಲೇಖಕ ಜೀವರಾಜ ಹನುಮಂತಪ್ಪ ಛತ್ರದ ಮೂಲತಃ ಹಾವೇರಿ ಜಿಲ್ಲೆಯ ಬ್ಯಾಡಗಿಯವರು. ಸರ್ಕಾರಿ ಪ್ರೌಢಶಾಲಾ ಶಿಕ್ಷಕರು. ಹಾವೇರಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರು.  ಪ್ರಸ್ತುತ ಬ್ಯಾಡಗಿ ತಾಲೂಕಿನ ಮಾಸನಗಿ ಸರಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 

ಕೃತಿಗಳು: ಖುಷಿ ತರಲಿ ಕೃಷಿ, ಅಕ್ಕಡಿ ಕಾಳು( ವೈಚಾರಿಕ ಲೇಖನಗಳು), ಯಾಲಕ್ಕಿ ಹಾಲಕ್ಕಿ, ರಮ್ಯಗಾನ, ಅನುವಿನು, ದಾಂಪತ್ಯ ಗೀತೆಗಳು, ಜೀವಣ್ಣನ ಆಧುನಿಕ ತ್ರಿಪದಿಗಳು, ಅಸಲಿ ಮಳೆ, ಹನಿ ಹನಿ ಕಾವ್ಯಧಾರೆ, ಮಂಜೂರ್ಶಿ, ಸೂರು ಗುಡ್ಡ, ಉದಯ ರಶ್ಮಿ (ಕವನ ಸಂಕಲನಗಳು)

ಜೀವರಾಜ ಹ ಛತ್ರದ