About the Author

ಕೇರಳದ ಕಾಸರಗೋಡು ಜಿಲ್ಲೆಯ ಪಾತನಡ್ಕ ಎಂಬ ಹಳ್ಳಿಯಲ್ಲಿ ಜನಿಸಿದ ಗಂಗಾಧರನ್‌ ಅವರು ಬಾಲ್ಯವನ್ನು ಕೊಡಗಿನ ಸೋಮವಾರಪೇಟೆಯ ಸಮೀಪದ ಕಬ್ಬಿಣಸೇತುವೆಯಲ್ಲಿ ಕಳೆದರು. ಕಾಜೂರು, ಸೋಮವಾರಪೇಟೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ ಅವರು ಪುತ್ತೂರಿನ ವಿವೇಕಾನಂದ ಕಾಲೇಜಿನಿಂದ ಬಿಎಸ್‌ಸಿ ಪದವಿ ಪಡೆದರು. ಹಾಸನದ ಕೊಥಾರಿ ಕಾಫಿ ಕ್ಯೂರಿಂಗ್‌ ವರ್ಕ್ಸ್‌ನಲ್ಲಿ ವೃತ್ತಿ (1970) ಆರಂಭಿಸಿದ ಅವರು ನಂತರ ಅಂಚೆ ಇಲಾಖೆಯ ರೈಲ್ವೆ ಮೇಲ್‌ ಸರ್ವಿಸ್‌ ವಿಭಾಗದಲ್ಲಿ (1974) ಉದ್ಯೋಗ ಪಡೆದರು. ಅರಸೀಕೆರೆ, ತುಮಕೂರು, ಮೈಸೂರು, ಮಡಿಕೇರಿ ಹಾಗೂ ಬೆಂಗಳೂರುಗಳಲ್ಲಿ ಕೆಲಸ ಮಾಡಿದ ಅವರು ನಿವೃತ್ತ (2009)ರಾದರು. ಸದ್ಯ ಬೆಂಗಳೂರಿನ ವಿಶ್ವನೀಡಂನಲ್ಲಿ ನೆಲೆಸಿದ್ದಾರೆ.

 

ಕೆ.ಕೆ. ಗಂಗಾಧರನ್

(10 Mar 1949)