About the Author

ಕೆ.ಎಂ.ಸೀತಾರಾಮಯ್ಯನವರು 1929 ಅಕ್ಟೋಬರ್ 10ರಂದು ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಕೆಂಪಸಾಗರದಲ್ಲಿ ಜನಿಸಿದರು. ತಾಯಿ ವೆಂಕಟಲಕ್ಷ್ಮಮ್ಮ, ತಂದೆ ಕೆ.ಮೈಲಾರಯ್ಯ. ಅರಸೀಕೆರೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಸೀತಾರಾಮಯ್ಯನವರು ಹಾಸನದಲ್ಲಿ ಇಂಟರ್ ಮೀಡಿಯೇಟ್ ಶಿಕ್ಷಣ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ ಪದವಿ ಪಡೆದರು. ಮೈಸೂರು ವಿಶ್ವವಿದ್ಯಾಲದಿಂದ ಸ್ನಾತಕೋತ್ತರ ಪದವಿ ಪಡೆದರು. ಅಧ್ಯಾಪಕರಾಗಿ ವೃತ್ತಿ ಆರಂಭಿಸಿ ರಾಜ್ಯದ ನಾನಾ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾದರು. ಅವರು 2023 ನ. 20 ರಂದು ನಿಧನರಾದರು.

ಸೀತಾರಾಮಯ್ಯನವರ ಪ್ರಮುಖ ಕೃತಿಗಳೆಂದರೆ ಸಪ್ತಸ್ವರ, ಮಾನಸಪೂಜೆ, ರಾಜರಹಸ್ಯ, ಸಂನ್ಯಾಸಿ, ಇಲಿಯಡ್‌ ಮತ್ತು ಒಡಿಸ್ಸಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಇವರಿಗೆ ದೇವರಾಜ ಬಹದ್ದೂರ್ ಸಾಹಿತ್ಯ ಪ್ರಶಸ್ತಿ, ಗೊರೂರು ಸಾಹಿತ್ಯ ಪ್ರಶಸ್ತಿ, ಕರ್ನಾಟಕ ಅನುವಾದ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಕುಮಾರ ವಾಲ್ಮೀಕಿ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಲಭಿಸಿವೆ.

ಕೆ.ಎಂ. ಸೀತಾರಾಮಯ್ಯ

(10 Oct 1929-20 Nov 2023)