About the Author

ಕವಿ ಕೆ. ಎನ್. ಲಾವಣ್ಯ ಪ್ರಭ ಅವರು ಮೂಲತಃ ಮೈಸೂರಿನವರು. ಅವರು 1971 ನವೆಂಬರ್‌ 02ರಂದು ಜನಿಸಿದರು. ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಡಾ. ಆರ್‌. ರಾಮಕೃಷ್ಣ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ ಅವರು ‘ಎಂ. ವಿ. ಸೀತಾರಾಮಯ್ಯನವರ ಸಾಹಿತ್ಯ’ ಪ್ರಬಂಧಕ್ಕೆ ಮೈಸೂರು ವಿವಿಯಿಂದ ಪಿಎಚ್‌.ಡಿ ಪದವಿ ಗಳಿಸಿದ್ದಾರೆ. ಇವರ ಹಲವಾರು ಕವಿತೆಗಳು ಕನ್ನಡದ ದಿನ ಪತ್ರಿಕೆ ಹಾಗೂ ಮಾಸ ಪತ್ರಿಕೆಗಳಲ್ಲಿ ಪ್ರಕಟಣೆ ಕಂಡಿವೆ.

‘ನದಿ ಧ್ಯಾನದಲ್ಲಿದೆ’, ‘ಹುಟ್ಟಲಿರುವ ನಾಳೆಗಾಗಿ’, ‘ಗೋಡೆಗಿಡ’ ಅವರ ಕವನ ಸಂಕಲನಗಳು. ಸಂಶೋಧನಾ ಪ್ರಬಂಧ ಅವರ ಕವನ ಸಂಕಲನ. ತಮ್ಮದೇ ಯುಟ್ಯೂಬ್‌ ಚಾನೆಲ್‌ ಮೂಲಕ ಕಾವ್ಯ ವಾಚನ ಮಾಡಿ ಆಸಕ್ತರಿಗೆ ತಲುಪಿಸುತ್ತಿದ್ದಾರೆ. 

ಕೆ.ಎನ್. ಲಾವಣ್ಯ ಪ್ರಭಾ