About the Author

ಕೆ.ಸತ್ಯನಾರಾಯಣ ಅವರು ಹುಟ್ಟಿದ್ದು 1954 ಏಪ್ರಿಲ್ 21 ರಂದು. ಮಂಡ್ಯ ಜಿಲ್ಲಾ ಮದ್ದೂರು ತಾಲೋಕು ಕೊಪ್ಪ ಗ್ರಾಮದಲ್ಲಿ. 1972ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎ.ಪದವಿ(ಸುವರ್ಣ ಪದಕದೊಂದಿಗೆ). 1978ರಲ್ಲಿ ಇದೇ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ. 

1978ರಲ್ಲಿ ಭಾರತ ಸರ್ಕಾರದ ಇಂಡಿಯನ್ ರೆವಿನ್ಯೂ ಸರ್ವೀಸ್ ಗೆ ಸೇರಿ ಆದಾಯ ತೆರಿಗೆ ಇಲಾಖೆಯಲ್ಲಿ ದೇಶದ ನಾನಾ ಭಾಗಗಳಲ್ಲಿ ಕೆಲಸ ಮಾಡಿ(ಏಪ್ರಿಲ್ 2014ರಲ್ಲಿ ಕರ್ನಾಟಕ ಮತ್ತು ಗೋವಾ ವಲಯದ ಪ್ರಧಾನ ಮುಖ್ಯ ಆಯುಕ್ತರಾಗಿ, ಬೆಂಗಳೂರು) ನಿವೃತ್ತಿ. 

ಸಣ್ಣಕಥೆ, ಕಿರುಕಥೆ, ಕಾದಂಬರಿ, ಪ್ರಬಂಧ, ವ್ಯಕ್ತಿಚಿತ್ರ, ಆತ್ಮಚರಿತ್ರೆ, ಅಂಕಣಬರಹ, ವಿಮರ್ಶೆ, ಪ್ರವಾಸಕಥನ- ಹೀಗೆ ಬೇರೆ ಬೇರೆ ಪ್ರಕಾರಗಳಲ್ಲಿ ಹಲವಾರು ಕೃತಿಗಳ ಪ್ರಕಟನೆ. 

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಬಂಧ ಹಾಗೂ ಕಾದಂಬರಿ ಹಾಗೂ ಸಣ್ಣ ಕಥೆಗಳಿಗೆ ಪುರಸ್ಕಾರ. ಮಾಸ್ತಿ ಕಥಾ ಪುರಸ್ಕಾರ(ನಕ್ಸಲ್ ವರಸೆ-2010 ) ಮತ್ತು ಕಥಾ ಸಾಹಿತ್ಯ ಸಾಧನೆಗೆ ಮಾಸ್ತಿ ಪ್ರಶಸ್ತಿ, ಒಟ್ಟು ಸಾಹಿತ್ಯ ಸಾಧನೆಗೆ ಬಿ.ಎಂ.ಶ್ರೀ.ಪ್ರತಿಷ್ಠಾನದ ಎಂ.ವಿ.ಸೀ.ಪ್ರಶಸ್ತಿ, ಬೆಂಗಳೂರು ವಿವಿಯ ಗೌರವ ಡಾಕ್ಟರೇಟ್(2013), ರಾ.ಗೌ.ಪ್ರಶಸ್ತಿ, ಬಿ.ಎಚ್.ಶ್ರೀಧರ ಪ್ರಶಸ್ತಿ, ವಿಶ್ವಚೇತನ ಪ್ರಶಸ್ತಿ, ಸಾವಿನ ದಶಾವತಾರ ಕಾದಂಬರಿಗೆ ಸೂರ್ಯನಾರಾಯಣ ಚಡಗ ಪ್ರಶಸ್ತಿ ಲಭಿಸಿದೆ.

ಕೆ. ಸತ್ಯನಾರಾಯಣ

(21 Apr 1954)

Books by Author

BY THE AUTHOR

ABOUT THE AUTHOR