About the Author

ಲೇಖಕಿ ಕೆ.ಷರೀಫಾ ಅವರು 1957 ಮೇ 05ರಂದು ಗುಲಬರ್ಗಾದಲ್ಲಿ ಜನಿಸಿದರು. ತಂದೆ ಬಾಬುಮಿಯಾ, ತಾಯಿ ಪುತಲೀಬೇಗಂ. ಬಿಡುಗಡೆಯ ಕವಿತೆಗಳು, ನೂರೇನ್‌ಳ ಅಂತರಂಗ, ಪಾಂಚಾಲಿ, ಮುಮ್ರಾಜಳ ಮಹಲು, ಬುರ್ಖಾ ಪ್ಯಾರಡೈಸ್, ಸಂವೇದನೆ (ವಿಮರ್ಶೆ), ಮಹಿಳಾ ಮಾರ್ಗ (ಸಹ ಸಂಪಾದನೆ), ಆಧುನಿಕ ಕನ್ನಡ ಸಾಹಿತ್ಯದಲ್ಲಿ ಮುಸ್ಲಿಂ ಮಹಿಳಾ ಸಂವೇದನೆ (ಸಂಶೋಧನೆ), ಹೊಸ ಶತಮಾನದ ಕಾವ್ಯ (ಸಂಪಾದನೆ) ಅವರ ಪ್ರಕಟಿತ ಕೃತಿಗಳು. ಅವರಿಗೆ ಮಹಿಳೆ ಮತ್ತು ಸಮಾಜ ಪ್ರಶಸ್ತಿ, ವನಿತಾ ಸಾಹಿತ್ಯ ಶ್ರೀ ಪ್ರಶಸ್ತಿ, ಅತ್ತಿಮಬ್ಬೆ ಸಾಹಿತ್ಯ ಶ್ರೀ ಪ್ರಶಸ್ತಿ, 2019ನೇ ಸಾಲಿನ ಕ.ಸಾ.ಪದ ಶ್ರೀನಿವಾಸ ಸ್ಮರಣಾರ್ಥ ಪಿ.ಕೆ. ನಾರಾಯಣ ದತ್ತಿ ಪ್ರಶಸ್ತಿ ದೊರೆತಿದೆ. 

ಕೆ. ಷರೀಫಾ

(05 May 1957)