About the Author

ಬೆಳಗಾವಿ ಜಿಲ್ಲೆಯ ಹಾರೂಗೇರಿ ಗ್ರಾಮ (ಜನನ: 06-05-1967) ಹುಟ್ಟೂರು. ಧಾರವಾಡ, ದಾವಣಗೆರೆ ಮತ್ತು ಬೀದರ್ ನಲ್ಲಿ ವಿದ್ಯಾಭ್ಯಾಸ. ಹಾರೂಗೇರಿಯ ಶ್ರೀ ಕರೇಸಿದ್ಧೇಶ್ವರ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ  ಮುಖ್ಯೋಪಾಧ್ಯಾಯರಾಗಿದ್ದರು.  'ಉಸುರಿನ ಪರಿಮಳವಿರಲು' ಕಥಾಸಂಕಲನ ಮತ್ತು 'ಪುರುಷ ದಾರಿಯ ಮೇಲೆ' ಕವನಸಂಕಲನಗಳ ಪ್ರಕಟಣೆ. ಜೊತೆಗೆ,ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಕಥೆ, ಕವನ,ಲೇಖನಗಳ ಪ್ರಕಟಣೆಯಾಗಿವೆ.

 'ಪಾಪು ಕಥಾ ಪ್ರಶಸ್ತಿ', 'ಜಯತೀರ್ಥ ರಾಜಪುರೋಹಿತ ಕಥಾ ಪ್ರಶಸ್ತಿ', 'ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆ, 'ವಿಜಯವಾಣಿ ದೀಪಾವಳಿ ಕಥಾಸ್ಪರ್ಧೆ', 'ಕರವೇ ಮಾಸಿಕದ ಕಥಾಸ್ಪರ್ಧೆ', 'ಗುರುತು ಮಾಸಿಕ ಕಥಾಸ್ಪರ್ಧೆ', 'ಪ್ರಜಾವಾಣಿ ದೀಪಾವಳಿ ಕಾವ್ಯಸ್ಪರ್ಧೆ', 'ತಿಂಗಳು ಮಾಸಿಕ ಪತ್ರಿಕೆಯ ಕಾವ್ಯಸ್ಪರ್ಧೆ', 'ಮೊಗವೀರ ಮಾಸಿಕದ ಕಥಾಸ್ಪರ್ಧೆ'ಗಳಲ್ಲಿ ಬಹುಮಾನ doretide.

 'ಪುರುಷ ದಾರಿಯ ಮೇಲೆ' ಕವನ ಸಂಕಲನಕ್ಕೆ 2007ನೇ ಸಾಲಿನ ಕ ಸಾ ಪ ದತ್ತಿನಿಧಿ ಪ್ರಶಸ್ತಿ ಹಾಗೂ ಬಿ ಆರ್ ಆಜೂರ್ ಪುಸ್ತಕ ಪ್ರತಿಷ್ಠಾನ ನೀಡುವ ಪುಸ್ತಕ ಬಹುಮಾನ ಲಭಿಸಿದೆ. ಸದ್ಯ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಜಿಲ್ಲಾ ಕೇಂದ್ರ ಗ್ರಂಥಾಲಯ, ಬಾಗಲಕೋಟೆಯ ತೇರದಾಳದ ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

ಕಲ್ಲೇಶ್ ಕುಂಬಾರ್

(06 May 1967)

Stories/Poems